NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಶಿವಮೊಗ್ಗ: ಹೆಚ್ಚುವರಿ ಬಸ್‌ ಬಿಡಿ ಎಂದರೂ ಸ್ಪಂದಿಸದ ಅಧಿಕಾಗಳ ವಿರುದ್ಧ ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಸಾಸ್ವೆಹಳ್ಳಿ (ಶಿವಮೊಗ್ಗ): ಸಮರ್ಪಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಹೊನ್ನಾಳಿ ತಾಲೂಕು ಲಿಂಗಾಪುರ ಬಸ್‌ ನಿಲ್ದಾಣದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ ನಡೆಸಿ ಸಂಸ್ಥೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಿನ್ನೆ ಬೆಳಗ್ಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹೊನ್ನಾಳಿಯಿಂದ ಸಾಸ್ವೆಹಳ್ಳಿ ಆನವೇರಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹೋಗುವ ಸಾರಿಗೆ ಬಸ್‌ಗಳು ಪ್ರತಿನಿತ್ಯ ಹೊನ್ನಾಳಿಯಿಂದ ಸಾಸ್ವೆಹಳ್ಳಿ ಬಸ್‌ ನಿಲ್ದಾಣಕ್ಕೆ ಬರುವಷ್ಟರಲ್ಲಿ 90 ರಿಂದ 150 ಪ್ರಯಾಣಿಕರು ತುಂಬಿರುತ್ತಾರೆ.

ಹೀಗಾಗಿ ಸಾಸ್ವೆಹಳ್ಳಿ ನಂತರ ಶಿವಮೊಗ್ಗದವರೆಗೂ 45 ಕಿಮೀ ಯಾವುದೇ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಹತ್ತಲು ಬಸ್‌ನಲ್ಲಿ ಸ್ಥಳವೇ ಇರಲ್ಲ. ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್‌ ಗೆ ಜೋತು ಬಿದ್ದು ಪ್ರಯಾಣಿಸುವ ದುಸ್ಥಿತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು.

ಈ ಬಗ್ಗೆ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್‌ ಕುಮಾರ್‌ ಹಾಗೂ ಡಿಟಿಒ ದಿನೇಶ್‌ ಚನ್ನಗಿರಿಗೆ ಹಲವು ಬಾರಿ, ಈ ಮಾರ್ಗದಲ್ಲಿ ಹೆಚ್ಚುವರಿ ಬಸ್‌ ಬಿಡುವಂತೆ ಮನವಿ ಸಲ್ಲಿಸಲಾಗಿದೆ. ಆದರೆ ಈ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಹೀಗಾಗಿ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತಿಳಿಸಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾಳಿ ಡಿಪೋ ಮ್ಯಾನೇಜರ್‌ ರಾಮಚಂದ್ರಪ್ಪ ಬಂದು ಮಾತನಾಡಿ, ವಿದ್ಯಾರ್ಥಿಗಳಿಗೆ ಅಕ್ಟೋಬರ್‌ 6 ರೊಳಗೆ ಈ ಮಾರ್ಗವಾಗಿ ಸರ್ವೆ ಕಾರ್ಯ ನಡೆಸಿ ಹೆಚ್ಚುವರಿ ಬಸ್‌ ಬಿಡುವುದಾಗಿ ತಿಳಿಸಿದರು.

ಆಗ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಈ ನಿಗದಿತ ದಿನದೊಳಗೆ ಹೆಚ್ಚುವರಿ ಬಸ್‌ ಬಿಡದೆ ಹೋದಲ್ಲಿ ಅ.6ರಂದು ಸಾಸ್ವೆಹಳ್ಳಿಯಲ್ಲಿ ಸಾರಿಗೆ ಬಸ್‌ ತಡೆಯುವ ಮೂಲಕ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ, ಪ್ರತಿಭಟನೆ ಹಿಂಪಡೆದರು.

ಈ ಸಮಯದಲ್ಲಿ ಸಾರಿಗೆ ಇಲಾಖೆಯ ಸೆಕ್ಯೂರಿಟಿ ಆಫೀಸರ್‌ ಮಂಜುನಾಥ್‌, ತಪಾಸಣೆ ಇನ್ಸ್‌ಫೆಕ್ಟರ್‌ ಚಂದ್ರಶೇಖರ್‌, ಟ್ರಾಫಿಕ್‌ ಕಂಟ್ರೋಲರ್‌ ನಾಗರಾಜಪ್ಪ, ಪೊಲೀಸ್‌ ಪೇದೆಗಳಾದ ದೇವರಾಜ್‌, ಮಂಜುನಾಥ್‌, ಲಿಂಗಾಪುರ ಹಾಗೂ ಸುತ್ತಮುತ್ತಲಿನ ಹಳ್ಳಿಯ ವಿದ್ಯಾರ್ಥಿಗಳು, ಪೋಷಕರು ಇದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ