NEWSVideosನಮ್ಮರಾಜ್ಯ

KSRTC ಹಾಸನ: ಬಸ್‌ ನಿಲುಗಡೆ ವಿಚಾರಕ್ಕೆ ಕರ್ತವ್ಯ ನಿರತ ನಿರ್ವಾಹಕನ ಮೇಲೆ ಪುಂಡರಿಂದ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ಅರಕಲಗೂಡು ಘಟಕದ ಅರಕಲಗೂಡು ಮತ್ತು ಗೊರೂರು ಪಕ್ಕದ ಗ್ರಾಮದಲ್ಲಿ ಬಸ್ಸಿನ ನಿಲುಗಡೆ ವಿಚಾರಕ್ಕೆ ಕರ್ತವ್ಯ ನಿರತ ನಿರ್ವಾಹಕನ ಮೇಲೆ ಗ್ರಾಮದ ಗ್ರಾಮಸ್ಥರು ಹಲ್ಲೆ ಮಾಡಿದ್ದು ಅಲ್ಲದೆ ಬಾಯಿ ಬಂದಂತೆ ಮಾತನಾಡಿದ್ದಾರೆ.

ಅವಾಚ್ಯ ಶಬ್ದಗಳಿಂದ ನಿಂದಿಸಿ ಏಕಾಏಕಿ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ್ದು, ಡಿಸಿಯನ್ನೇ ಸ್ಥಳಕ್ಕೆ ಕರೆಸುತ್ತೇವೆ ಎಂಬ ದಬ್ಬಾಳಿಕೆಯನ್ನು ತೋರಿದ್ದಾರೆ. ಈ ರೀತಿ ಇಂಥ ಪುಂಡರು KSRTC ಸಾರಿಗೆ ನೌಕರರಾದ ಚಾಲಕ – ನಿರ್ವಾಹಕರ ಮೇಲೆ ಹಲ್ಲೆ ಮಾಡಿದರೆ ಕರ್ತವ್ಯ ಮಾಡಲು ಸಾಧ್ಯವೇ?

ಇಂಥ ಕಿಡಿಗೇಡಿಗಳೀಗೆ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ರೀತಿ ಪಾಠಕಲಿಸಬೇಕು. ಇಲ್ಲದಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಅದನ್ನು ಕಂಡು ಕಾಣದಂತೆ ವರ್ತಿಸಿದರೆ ಮುಂದೆ ಚಾಲನಾ ಸಿಬ್ಬಂದಿಗಳು ಡ್ಯೂಟಿ ಮಾಡುವುದಕ್ಕೇ ಕಷ್ಟವಾಗಲಿದೆ. ಹಾಗಾಗಿ ಕೂಡಲೇ ಈ ಬಗ್ಗೆ ಮೇಲಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.

ಅಧಿಕಾರಿಗಳು ಚಾಲನಾ ಸಿಬ್ಬಂದಿಗಳು ನಮ್ಮ ಕೆಳ ಹಂತದ ಉದ್ಯೋಗಿಗಳು ಅವರಿಗೆ ತೊಂದರೆ ಆದರೆ ಇಡೀ ಸಂಸ್ಥೆಗೆ ಸಮಸ್ಯೆಯಾದಂತೆ ಎಂಬ ನಿಲುವನ್ನು ತಾಳಬೇಕು. ಆದರೆ ಏಕೋ ಗೊತ್ತಿಲ್ಲ ನೌಕರರ ವಿಷಯ ಬಂದಾಗ ಮೌನವಾಗುತ್ತಾರೆ. ಸದೇ ನೌಕರರ ವಿರುದ್ಧ ಯಾವುದಾದರೊಂದು ಆರೋಪ ಕೇಳಿ ಬಂದ ಕೂಡಲೇ ಅವರಿಗೆ ನೋಟಿಸ್‌ ಜಾರಿ ಮಾಡಿ ಕೂಡಲೇ ಅಮಾನತು ಮಾಡುತ್ತಾರೆ.

ಇದೇ ಶೀಘ್ರಗತಿಯ ಕ್ರಮವನ್ನು ನೌಕರರಿಗೆ ತೊಂದರೆ ಕೊಡುವ ಪುಂಡರ ವಿರುದ್ಧ ತೆಗೆದುಕೊಂಡಿದ್ದರೆ ಈ ರೀತಿಯ ಘಟನೆಗಳು ಆಗುತ್ತಿರಲಿಲ್ಲ ಆದರೆ ಈ ಬಗ್ಗೆ ಮಾತ್ರ ನಮ್ಮ ಕೈಯಲ್ಲಿ ಏನು ಇಲ್ಲ ಎಂಬಂತೆ ವರ್ತಿಸುತ್ತಾರೆ ಅಧಿಕಾರಿಗಳು ಈ ಪರಿಣಾಮ ನಿತ್ಯ ಒಂದಲ್ಲ ಒಂದುಕಡೆ ನೌಕರರು ಹಲ್ಲೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಇನ್ನು ಮುಂದಾದರೂ ಹಲ್ಲೆ ಮಾಡುವ ಕಿಡಿಗೇಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಬೇಕು.

ಇಂಥ ಘಟನೆಗಳು ಮರು ಕಳಿಸದಂತೆ ಎಚ್ಚರಿಕೆ ಸಂದೇಶಗಳನ್ನು ಸಂಸ್ಥೆಯಿಂದ ಪುಂಡರಿಗೆ ಕಳುಹಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಮಸ್ತ ನೌಕರರು ಒತ್ತಾಯ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ