NEWSನಮ್ಮಜಿಲ್ಲೆನಮ್ಮರಾಜ್ಯ

ಸೆ.29ರಂದು ಕನಿಷ್ಠ ಪಿಂಚಣಿ 7500 ರೂ.ಗೆ ಆಗ್ರಹಿಸಿ EPS ಪಿಂಚಣಿದಾರರ 30ನೇ ಬೃಹತ್‌ ಪ್ರತಿಭಟನೆ: ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸೆ.29, 2025 ರಂದು “ನಿಧಿ ಆಪ್ಕೆ ನಿಕಟ್” ಇಪಿಎಸ್ ಪಿಂಚಣಿದಾರರ 30ನೇ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. 238ನೇ ಸಿಬಿಟಿ ಸಭೆ ಬೆಂಗಳೂರಿನಲ್ಲಿ ಅ.11,12 ರಂದು ನಡೆಯುತ್ತಿರುವುದರಿಂದ ಈ ಇಪಿಎಸ್ ನಿವೃತ್ತರ 30ನೇ ಪ್ರತಿಭಟನಾ ಸಭೆ ಅತ್ಯಂತ ಮಹತ್ವದ್ದಾಗಿದೆ ಎಂದು ನಂಜುಂಡೇಗೌಡ ತಿಳಿಸಿದ್ದಾರೆ.

ಈ ಸಂಬಂಧ ಬಿಎಂಟಿಸಿ ಹಾಗೂ ಕೆಎಸ್ಆರ್ ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಅವರು ಇಂದು ಪತ್ರಿಕಾ ಹೇಳಿಕೆ ನೀಡಿದ್ದು, ಸಿಬಿಟಿ ಸಭೆಯ ಪ್ರಸ್ತಾವನೆಯಲ್ಲಿ ಇಪಿಎಸ್ ನಿವೃತ್ತರ ಬಹುದಿನಗಳ ಬೇಡಿಕೆಗಳ ಬಗ್ಗೆ ವಿಷಯ ಮಂಡನೆಯಾಗಿ ಚರ್ಚೆಗೆ ಬರಬೇಕು ಎಂದರು.

ಇನ್ನು ಇಪಿಎಸ್ ನಿವೃತ್ತರ ವಿವಿಧ  ಬೇಡಿಕೆಗಳ ಈಡೇರಿಕೆಗೆ  ಸಂಬಂಧಿಸಿದಂತೆ ಸೆ.29ರ ಸೋಮವಾರ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದು, ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗುವ ಈ ಶಾಂತಿಯುತ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವರಿಗೆ ಮನವಿ ಸಲ್ಲಿಸುವ ಸಭೆಗೆ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಇನ್ನು ಇಪಿಎಸ್ ನಿವೃತ್ತರ ಕನಿಷ್ಠ ಪಿಂಚಣಿ 7,500 ರೂ.ಗಳು + ಭತ್ಯೆ ಹಾಗೂ ಆರೋಗ್ಯ ಸೌಲಭ್ಯ, ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ ₹5000 ನೀಡಬೇಕು. ಜಂಟಿ ಆಯ್ಕೆ ಪತ್ರ ಸಲ್ಲಿಸಿರುವ ಎಲ್ಲ ಇಪಿಎಸ್ ನಿವೃತ್ತರಿಗೆ ಇತ್ತೀಚಿನ ನ್ಯಾಯಾಲಯದ ತೀರ್ಪಿನ ಪ್ರಕಾರ ಅಧಿಕ ಹೆಚ್ಚುವರಿ ಪಿಂಚಣಿ ನೀಡಬೇಕು. ಅದಕ್ಕಾಗಿ ಈ ಪ್ರತಿಭಟನಾ ಸಭೆ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್, ಚಿಕ್ಕಬಳ್ಳಾಪುರ ವತಿಯಿಂದ ಆಯೋಜಿಸಿರುವ, ಇಪಿಎಸ್ ನಿವೃತ್ತರ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಮೂಲಕ ನಮ್ಮ ಕೂಗು ನವದೆಹಲಿಗೆ ತಲಪಬೇಕು, ಹಾಗಾಗಿ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ಶಾಂತಿಯುತ ಬೃಹತ್‌ ಪ್ರತಿಭಟನೆ ಹಾಗೂ ಮನವಿಪತ್ರ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನಾ ಸಭೆಗೆ ನಮ್ಮ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲ ಇಪಿಎಸ್ ನಿವೃತ್ತರು, ಕಂಪನಿ ಹಾಗೂ ಕಾರ್ಖಾನೆಗಳ ನಿವೃತ್ತರು ಆಗಮಿಸಲಿದ್ದಾರೆ. ಇನ್ನು ಸಿಬಿಟಿ ಸಭೆಯಲ್ಲಿ ನಮ್ಮ ಹಕ್ಕೋತ್ತಾಯಕ್ಕೆ ಅಗ್ರಹಿಸಿ ಪ್ರತಿಭಟಿಸಲಾಗುವುದು ಎಂದಿದ್ದಾರೆ.

ಈ ನಮ್ಮ ಹೋರಾಟ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಹೈಯರ್ ಪಿಂಚಣಿ (ನ್ಯಾಯಾಲಯದ ತೀರ್ಪಿನ ಪ್ರಕಾರ) ಎರಡೂ ಅಂಶಗಳು ಈಡೇರುವವರೆಗೂ ಈ ಹೋರಾಟ ನಿಲ್ಲದು. ಈ ದೆಶೆಯಲ್ಲಿ ಎಲ್ಲ ಇಪಿಎಸ್ ನಿವೃತ್ತರು ಸಂಘಟಿತರಾಗಿ ಹೋರಾಟವನ್ನು ತೀವ್ರಗೊಳಿಸುವುದು ಅವಶ್ಯಕವಾಗಿದೆ. ನಮ್ಮ ಹೋರಾಟದ ಸಂದೇಶ ದೆಹಲಿ ತಲುಪಬೇಕು ಈ ದೃಷ್ಟಿಯಿಂದ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

 

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ