NEWSನಮ್ಮಜಿಲ್ಲೆನಮ್ಮರಾಜ್ಯ

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ: ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದ್ದು, ಇದರ ಭಾಗವಾಗಿ ಯದುವೀರ್ ಒಡೆಯರ್‌ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿಯ ಬನ್ನಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ನಾಡಿಗೆ ಜನತೆ ಸಮೃದ್ಧಿಯಿಂದ ಇರುವಂತೆ ಪ್ರಾರ್ಥಿಸಿದ್ದಾರೆ.

ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಸಲಾಯಿತು. ಬಳಿಕ ಯದುವೀರ್ ಒಡೆಯರ್‌, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಪೂರ್ಣವಾಗುತ್ತಿದ್ದಂತೆ ಯದುವೀರ್ ಅರಮನೆಗೆ ವಾಪಸ್ ಆದರು. ಇದರೊಂದಿಗೆ ಅರಮನೆ ದಸರಾ ಪೂರ್ಣಗೊಂಡಿದೆ.

ಇನ್ನು ಈ ವೇಳೆ ಪೊಲೀಸ್‌ ಬ್ಯಾಂಡ್‌ ಜತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Deva
the authorDeva

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ