NEWSನಮ್ಮಜಿಲ್ಲೆನಮ್ಮರಾಜ್ಯ

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ: ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದ್ದು, ಇದರ ಭಾಗವಾಗಿ ಯದುವೀರ್ ಒಡೆಯರ್‌ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿಯ ಬನ್ನಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ನಾಡಿಗೆ ಜನತೆ ಸಮೃದ್ಧಿಯಿಂದ ಇರುವಂತೆ ಪ್ರಾರ್ಥಿಸಿದ್ದಾರೆ.

ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಸಲಾಯಿತು. ಬಳಿಕ ಯದುವೀರ್ ಒಡೆಯರ್‌, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಪೂರ್ಣವಾಗುತ್ತಿದ್ದಂತೆ ಯದುವೀರ್ ಅರಮನೆಗೆ ವಾಪಸ್ ಆದರು. ಇದರೊಂದಿಗೆ ಅರಮನೆ ದಸರಾ ಪೂರ್ಣಗೊಂಡಿದೆ.

ಇನ್ನು ಈ ವೇಳೆ ಪೊಲೀಸ್‌ ಬ್ಯಾಂಡ್‌ ಜತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ