NEWSನಮ್ಮಜಿಲ್ಲೆರಾಜಕೀಯ

ತಿ.ನರಸೀಪುರ ಎಪಿಎಂಸಿ ಕಾಂಗ್ರೆಸ್‌ ತೆಕ್ಕೆಗೆ

ಎನ್. ಅನಿಲ್ ಕುಮಾರ್ ಅಧ್ಯಕ್ಷ ಮತ್ತು  ಶಂಕರ್ ನಾಯಕ್  ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ತಿ. ನರಸೀಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಎಪಿಎಂಸಿ ನೂತನ ಅಧ್ಯಕ್ಷರಾಗಿ ಮಾದೇಗೌಡನ ಹುಂಡಿ ಕ್ಷೇತ್ರದ ಎನ್. ಅನಿಲ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಕಲಿಯೂರು ಕ್ಷೇತ್ರದ ಅಭ್ಯರ್ಥಿ ಶಂಕರ್ ನಾಯಕ್ ಅವಿರೋಧ  ಆಯ್ಕೆಯಾಗಿದ್ದಾರೆ

ನಾಮಪತ್ರ ಸಲ್ಲಿಸಲು ನಿಗದಿಪಡಿಸಲಾಗಿದ್ದ ಸಮಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅನಿಲ್ ಕುಮಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಕೆ. ಶಂಕರ ನಾಯಕ್  ಬಿಟ್ಟಿರೆ ಬೇರಾರು ಉಮೇದುವಾರಿಕೆ ಸಲ್ಲಿಸದಿದ್ದರಿಂದ ಚುನಾವಣಾಧಿಕಾರಿ ಡಿ. ನಾಗೇಶ್  ಈ ಇವರಿಬ್ಬರ ಆಯ್ಕೆಯನ್ನು ಘೋಷಿಸಿದರು.

ಎಪಿಎಂಸಿಯಲ್ಲಿ ಒಟ್ಟು ಹದಿನಾರು ಸದಸ್ಯರ ಬಲವಿದ್ದು, ಈ ಪೈಕಿ ಕಾಂಗ್ರೆಸ್ ಪಕ್ಷದ ಬೆಂಬಲಿತ  5,  ಜೆಡಿಎಸ್ ನ 5 ಹಾಗೂ ಬಿಜೆಪಿ ಬೆಂಬಲಿತ  ಒಬ್ಬರು ಆಯ್ಕೆಗೊಂಡ ಸದಸ್ಯರಿದ್ದಾರೆ.  ಇನ್ನು ಬಿಜೆಪಿಯ ಮೂವರು ನಾಮ ನಿರ್ದೇಶಿತ ಸದಸ್ಯರಿದ್ದು, ವರ್ತಕರ ಕ್ಷೇತ್ರ ಹಾಗೂ ಎಪಿಎಂಸಿಯಿಂದ ತಲಾ ಒಬ್ಬರು ಆಯ್ಕೆಗೊಂಡಿದ್ದಾರೆ.

ಎಪಿಎಂಸಿಗೆ ನೂತನ  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಅನಿಲ್ ಕುಮಾರ್ ಹಾಗೂ ಶಂಕರ ನಾಯಕ್ ಅವರನ್ನು   ವರುಣಾ ವಿಧಾನಸಭಾ  ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಅಭಿನಂದಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್