ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಮಗು ಮೃತಪಟ್ಟಿದ್ದು ಬಸ್ ಚಾಲಕರ ಎರಡು ಕಾಲುಗಳು ಕಟ್ಆಗಿ ತಲೆಗೆ ತೀವ್ರ ಗಾಯವಾಗಿದೆ. ಅಲ್ಲದೆ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ದೇವರಹಿಪ್ಪರಗಿಯಲ್ಲಿ ನಡೆದಿದೆ.
ವಿಜಯಪುರ ವಿಭಾಗದ 2ನೇ ಘಟಕ ಬಸ್ ಮತ್ತು ಲಾರಿ ನಡುವೆ ದೇವರಹಿಪ್ಪರಗಿ ಹತ್ತಿರ ಅಪಘಾತವಾಗಿದೆ. ಶುಕ್ರವಾರ ರಾತ್ರಿ ಸುಮಾರ 9.30ರಲ್ಲಿ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಬಸ್ ಚಾಲಕನ ಎರಡು ಕಾಲುಗಳು ಕಟ್ಆಗಿವೆ. ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ 8 ವರ್ಷದ ಮಗು ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್ ಚಾಲಕ ಗುತ್ತಿಗೆ ಆಧಾರದಲ್ಲಿ ಡ್ಯೂಟಿ ಮಾಡುತ್ತಿದ್ದರು. ಇನ್ನು ಲಾರಿ ಚಾಲಕನ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಇತ್ತ ವಿಷಯ ತಿಳಿದ ಕೂಡಲೇ ದೇವರಹಿಪ್ಪರಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತಕ್ಕೆ ಏನು ಕಾರಣ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಅಪಘಾತದ ರಭಸಕ್ಕೆ ಬಸ್ನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಗ್ಲಾಸ್ಗಳು ಚೂರು ಚೂರಾಗಿ ಕಿತ್ತು ಬಿದ್ದಿದೆ.
ಅಪಘಾತ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.
Related
