NEWSನಮ್ಮಜಿಲ್ಲೆ

ಇಂದಿನಿಂದ ಕನಕಪುರ 9ದಿನ ಲಾಕ್‌ಡೌನ್‌

ಇದು ಸರ್ಕಾರದ ಆದೇಶವಲ್ಲ ಪಟ್ಟಣದ ಜನತೆಯ ಸ್ವಯಂ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಕನಕಪುರ: ಕೊರೊನಾ ಸೋಂಕಿತರ ಸಂಖ್ಯೆ ಪಟ್ಟಣದಲ್ಲಿ ಹೆಚ್ಚಾಗಿತ್ತಿರುವ ಹಿನ್ನೆಲೆಯಲ್ಲಿ ಕನಕಪುರವನ್ನು ಜುಲೈ 1ರವರೆಗೆ ಲಾಕ್ ಡೌನ್ ಮಾಡಲು ನಾಗರಿಕರು ಒಪ್ಪಿಗೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ.

ಕೊರೊನಾ ರಣಕೇಕೆಗೆ ಕನಕಪುರ ಜನ ಬೆಚ್ಚಿಬಿದ್ದಿದ್ದು, ಇಂದಿನಿಂದ (ಜೂನ್ 22)  ಕನಕಪುರದಲ್ಲಿ ಜನರು ಸ್ವಯಂ ಪ್ರೇರಿತರಾಗಿ ಲಾಕ್ ಡೌನ್ ಮುಂದಾಗಿದ್ದು, ಬೆಳಗ್ಗೆ 11 ರ ವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಅವಕಾಶ ನೀಡಲಾಗಿದೆ.

ನಂತರ ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಜನರು ಓಡಾಡುವಂತಿಲ್ಲ.  ಹೀಗಾಗಿ ಸೋಮವಾರ ಕೆಲ ಅಂಗಡಿಗಳು ಓಪನ್ ಆಗಿದ್ದು, ಹಲವು ಅಂಗಡಿಗಳು ಕ್ಲೋಸ್ ಆಗಿವೆ.

ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನಕಪುರ ಶಾಸಕರೂ ಆದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಪಟ್ಟಣದ ನಾಗರಿಕರ ಸಭೆ ನಡೆಯಿತು.  ಸಭೆಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರ ಸಲಹೆ ಪಡೆದು ನಂತರ 9 ದಿನ ಪಟ್ಟಣವನ್ನು ಲಾಕ್ ಡೌನ್ ಮಾಡುವ ಘೋಷಣೆ ಮಾಡಿದ್ದಾರೆ.

ಇದು ಸರ್ಕಾರದ ಆದೇಶವಲ್ಲ
ಕನಕಪುರವನ್ನು ಲಾಕ್ ಡೌನ್ ಮಾಡುತ್ತಿರುವುದು ಸರ್ಕಾರದ ಆದೇಶವಲ್ಲ, ಆರೋಗ್ಯಕ್ಕಾಗಿ. ಪಟ್ಟಣದ ನಾಗರಿಕರೆಲ್ಲರೂ ಸೇರಿ ತೆಗೆದುಕೊಂಡ ನಿರ್ಧಾರ.  ಇನ್ನು ಶಾಲೆ, ಕಾಲೇಜು ಪರೀಕ್ಷೆಗಳು ಮಾಮೂಲಿನಂತೆ ನಡೆಯುತ್ತವೆ, ಮದ್ಯದಂಗಡಿಗಳು ತೆರೆದಿರುತ್ತವೆ ಅವುಗಳಿಗೆ ಒಂದು ಸಮಯ ನಿಗದಿ ಮಾಡಲು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಕೆಶಿ ಹೇಳಿದರು.

ಇನ್ನು ಹಾಲು, ಹಣ್ಣು, ತರಕಾರಿ, ದಿನಸಿ ಅಂಗಡಿ, ಹಾಗೂ ಮಾಂಸದಂಡಿಗಳು ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ಮಾತ್ರ ತೆರೆಯಬೇಕು. ಮೆಡಿಕಲ್ ಸ್ಟೋರ್ ಮತ್ತು ಆಸ್ಪತ್ರೆ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಸಭೆ ಮಾಡಿ ಅಂತಿಮ ಮಾಡುತ್ತಾರೆ ಎಂದು ಡಿಕೆಶಿ ತಿಳಿಸಿದರು.

ಡಿಕೆಎಸ್ ಟ್ರಸ್ಟ್ ನಿಂದ ತಲಾ ನೂರು ರೂ.
ಜಿಲ್ಲೆಯಲ್ಲಿ ಕ್ವಾರಂಟೈನ್ ಇರುವ ಜನರಿಗೆ ಸರ್ಕಾರವು ಊಟಕ್ಕೆ 60 ರೂಪಾಯಿ ನಿಗದಿ ಮಾಡಿದೆ. ಸರ್ಕಾರ ನೀಡುವ ಹಣದ ಜೊತೆಗೆ ನಮ್ಮ ಡಿಕೆಎಸ್ ಟ್ರಸ್ಟ್ ವತಿಯಿಂದ ಒಬ್ಬರಿಗೆ ನೂರು ನೀಡುತ್ತೇವೆ. ಒಟ್ಟು ಒಬ್ಬರಿಗೆ 160 ರೂಪಾಯಿಯ ಉತ್ತಮ ದರ್ಜೆಯ ಆಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.  ಒಂದು ವೇಳೆ ಉತ್ತಮ ಊಟ ಒದಗಿಸಲು ಜಿಲ್ಲಾಡಳಿತಕ್ಕೆ ಕಷ್ಟವಾದರೆ ನಮ್ಮ ಟ್ರಸ್ಟ್ ವತಿಯಿಂದಲೇ ಸರಬರಾಜು ಮಾಡುತ್ತೇವೆ ಎಂದು ಹೇಳಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್