NEWSನಮ್ಮಜಿಲ್ಲೆನಮ್ಮರಾಜ್ಯ

ಅ.9ರಂದು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಿದಾರರ ಬೃಹತ್ ಪ್ರತಿಭಟನೆ: BMTC -KSRTC ನಿನೌಸಂ ಅಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 93ನೇ ಮಾಸಿಕ ಸಭೆ ಲಾಲ್‌ಬಾಗ್ ಆವರಣದಲ್ಲಿ (ಇಂದು) ಭಾನುವಾರ ಬಹಳ ಯಶಸ್ವಿಯಾಗಿ ಜರುಗಿದ್ದು, ಸಭೆಗೆ ನೂರಾರು ಇಪಿಎಸ್ ನಿವೃತ್ತರು ಆಗಮಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇನ್ನು ಈ ಸಭೆಯಲ್ಲಿ ಮುಖ್ಯವಾಗಿ ಕೈಗೊಂಡ ನಿರ್ಣಯವೇನೆಂದರೆ, ಈಗಾಗಲೇ ನಿರ್ಧರಿಸಿದಂತೆ ಇದೇ ಅ.9ರಂದು ಫ್ರೀಡಂಪಾರ್ಕ್ ಮೈದಾನದಲ್ಲಿ ಇಪಿಎಸ್ ನಿವೃತ್ತರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದರು.

ಇನ್ನು ಈ ಸಭೆಗೆ ಮುಖ್ಯ ಅತಿಥಿಗಳಾಗಿ ರಾಜ್ಯ ಉಚ್ಚ ನ್ಯಾಯಾಲಯದ ನಾಲ್ಕು ಜನ ವಕೀಲರು ಆಗಮಿಸಲಿದ್ದು, ಸರ್ವೋಚ್ಚ ನ್ಯಾಯಾಲಯ ಹಾಗೂ ಇತ್ತೀಚೆಗೆ ಹಲವು ರಾಜ್ಯಗಳ ಉಚ್ಚ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಪರಾಮರ್ಶಿಸಿ ಭಾಷಣ ಮಾಡುವ ಸಂಗತಿಯನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ಈ ಪ್ರಸ್ತಾವನೆಗೆ ಎಲ್ಲ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 11,12, 2025 ರಂದು ಬೆಂಗಳೂರು ನಗರದಲ್ಲಿ 238 ನೇ ಸಿಬಿಟಿ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಪ್ರತಿಭಟನಾ ಸಭೆ ಅತ್ಯಂತ ಮಹತ್ವದ್ದಾಗಿದ್ದು, ಈ ಸಭೆಯಲ್ಲಿ ನಮ್ಮ ಪ್ರಮುಖ ಬೇಡಿಕೆ ಎಲ್ಲ ಇಪಿಎಸ್ ನಿವೃತ್ತರಿಗೆ ಕನಿಷ್ಠ ಪಿಂಚಣಿ 7,500 ರೂ. ಭತ್ಯೆ + ವೈದ್ಯಕೀಯ ಸೌಲಭ್ಯ ನೀಡಬೇಕು.

ಈ ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ 5000 ರೂ. ನೀಡಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಎಲ್ಲ ಇಪಿಎಸ್ ನಿವೃತ್ತರಿಗೆ ಅಧಿಕ ಹೆಚ್ಚುವರಿ ಪಿಂಚಣಿ ನೀಡಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ತಿಳಿಸಿದರು.

ಇಂದಿನ ಮಾಸಿಕ ಸಭೆ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಸಭೆಯ ನಿರ್ಣಯಗಳ ಬಗ್ಗೆ ಸದಸ್ಯರು ತಮ್ಮ ಹರ್ಷ ವ್ಯಕ್ತಪಡಿಸಿ, ಅಕ್ಟೋಬರ್ 9ರ ಪ್ರತಿಭಟನಾ ಸಭೆಗೆ ಹೆಚ್ಚಿನ ಇಪಿಎಸ್ ನಿವೃತ್ತರು ಆಗಮಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡೋಣ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ನಂಜುಂಡೇಗೌಡ ವಿವರಿಸಿದರು.

ಬಿಎಂಟಿಸಿ & ಕೆಎಸ್ಆರ್ ಟಿಸಿ ನಿವೃತ್ತ ನೌಕರರ ಸಂಘದ ಖಜಾಂಚಿ ಡೋಲಪ್ಪ, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಟ್ರಸ್ಟಿನ ಅಧ್ಯಕ್ಷರಾದ ಬ್ರಹ್ಮಚಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪದಾಧಿಕಾರಿಗಳಾದ ನಾಗರಾಜು, ಮನೋಹರ್, ರುಕ್ಮೇಶ್, ಕೃಷ್ಣಮೂರ್ತಿ, ರಮೇಶ್ ಹಾಜರಿದ್ದು ಸಭೆಯ ನಿರ್ವಹಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ