NEWSನಮ್ಮಜಿಲ್ಲೆಸಂಸ್ಕೃತಿ

ಬನ್ನೂರು: ಮುಜರಾಯಿ ದೇವಾಲಯಗಳ ಅರ್ಚಕರಿಗೆ ಆಹಾರ ಕಿಟ್‌ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಕೊರೊನಾ ಭಯದಿಂದ  ದೇವಾಲಯಗಳನ್ನು ಲಾಕ್‌ಡೌನ್‌ ಮಾಡಿದ್ದ ಹಿನ್ನೆಲೆಯಲ್ಲಿ ದೇವಾಲಯಗಳ ಅರ್ಚಕರು ನಿತ್ಯ ಜೀವನಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಹೋಬಳಿಯ ಮುಜರಾಯಿ ದೇವಾಲಯಗಳ ಸುಮಾರು ನೂರು ಅರ್ಚಕರಿಗೆ ಜ್ಯೋತಿಷಿ  ಬೋಳಪ್ಪ ಗುರೂಜಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ.

ಇತ್ತೀಚೆಗೆ ನಡೆದ ಆಹಾರ ಕಿಟ್‌ ವಿತರಣೆ ಸಮಾರಂಭದಲ್ಲಿ ತಿ.ನರಸೀಪುರ ತಹಸೀಲ್ದಾರ್‌ ನಾಗೇಶ್‌ ಅವರಿಂದ ಆಹಾರ ಕಿಟ್‌ಗಳನ್ನು ಅರ್ಚಕರಿಗೆ ಕೊಡಿಸಿ ಮಾತನಾಡಿದ ಬೋಳಪ್ಪ ಗುರೂಜಿ, ಬನ್ನೂರು ಹೋಬಳಿಯಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಎಲ್ಲಾ ದೇವಾಲಯಗಳ ಅರ್ಚಕರನ್ನು ಗುರುತಿಸಿ ಸ್ವಂತ ಹಣದಿಂದ 5ಕೆಜಿ ಅಕ್ಕಿ, ಅರ್ಧ ಕೆಜಿ ಬೇಳೆ ಸೇರಿದಂತೆ 18 ನಿತ್ಯೋಪಯೋಗಿ ವಸ್ತುಗಳನ್ನು ವಿತರಣೆ ಮಾಡಲಾಗಿದೆ ಎಂದರು.

ತಹಸೀಲ್ದಾರ್‌ ನಾಗೇಶ್‌ ಮಾತನಾಡಿ, ಮುಜರಾಯಿ ದೇವಾಲಯಗಳ ಅರ್ಚಕರಿಗೆ ಸರ್ಕಾರದಿಂದ ನೆರವು ನೀಡಲಾಗುತ್ತಿದೆ. ಜತೆಗೆ ಇಂಥ ದಾನಿಗಳು ನೆರವು ನೀಡುತ್ತಿರುವುದು  ಒಳ್ಳೆಯ ಬೆಳವಣಿಗೆ, ಜ್ಯೋತಿಷಿ ಬೋಳಪ್ಪ ಗುರೂಜಿ ಅವರಂತೆ ಉಳ್ಳವರು  ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕು ಎಂದು ಕರೆ ನೀಡಿದರು.

ಇಂಟರ್‌ ನ್ಯಾಷನಲ್‌ ಸ್ಕೂಲ್‌ ಕಾರ್ಯದರ್ಶಿ ರಾಜೇಶ್‌, ಕೆ.ವಿ.ಉಷಾರಾಣಿ, ಕುಮಾರ್‌ ಮತ್ತಿತರರು ಇದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ