ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 249 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆಯಾಗಿದೆ.
ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು ಇಂದು ಕೂಡ 5 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 146ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
24 ಗಂಟೆಗಳಲ್ಲಿ ರಾಜ್ಯದಲ್ಲಿ 111 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 5,730 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 3,523 ಸಕ್ರಿಯ ಪ್ರಕರಣಗಳಿವೆ. ಇಂದು ಕಂಡುಬಂದಿರುವ 249 ಹೊಸ ಪ್ರಕರಣಗಳಲ್ಲಿ 50 ಮಂದಿ ಹೊರರಾಜ್ಯ ಮತ್ತು 11ಮಂದಿ ಅಂತಾರಾಷ್ಟ್ರ ಪ್ರಯಾಣದ ಇತಿಹಾಸ ಹೊಂದಿದ್ದಾರೆ.
ಬೆಂಗಳೂರು ನಗರ 126 ಸೇರಿ ಒಟ್ಟು 249 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ದಾಖಲಾಗಿವೆ. ಇನ್ನು ಕೋವಿಡ್-19ಗೆ ಐದು ಮಂದಿ ಬಲಿಯಾಗಿದ್ದು, ಅದರಲ್ಲಿ ಮೂವರು ಬೆಂಗಳೂರು ನಗರ, ಒಬ್ಬರು ರಾಮನಗರ ಇನ್ನೊಬ್ಬರು ಬಳ್ಳಾರಿ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಸಂಜೆಯ ಬುಲೆಟಿನ್ನಲ್ಲಿ ತಿಳಿಸಿದೆ.
ದೇಶದಲ್ಲಿ 426,910 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 426,910 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ 13,703 ಮಂದಿ ಮೃತಪಟ್ಟಿದ್ದಾರೆ. 237,252 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 9,079,104 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 471,257 ಜನರು ಮೃತಪಟ್ಟಿದ್ದಾರೆ 4,861,834 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail