NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ 3 ನಿಗಮಗಳ ನೌಕರರಿಗೆ ಗುಡ್‌ನ್ಯೂಸ್‌:  ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಶೀಘ್ರದಲ್ಲೇ ಜಾರಿ- ರಾಮಲಿಂಗಾರೆಡ್ಡಿ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಅಧಿಕಾರಿಗಳು/ ನೌಕರರಿಗೆ ಜಾರಿಗೆ ತಂದಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಉಳಿದ ಮೂರು ಸಾರಿಗೆ ನಿಗಮಗಳಲ್ಲೂ ಶೀಘ್ರವಾಗಿ ಜಾರಿಗೆ ತರಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಸಾರಿಗೆ ನೌಕರರ ಹಲವು ವರ್ಷಗಳ ಅತೀ ಮುಖ್ಯ ಬೇಡಿಕೆಗಳಲ್ಲಿ ಒಂದಾಂದ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಕೆಎಸ್ಆರ್ಟಿಸಿ ನಿಗಮದಲ್ಲಿ ಕಳೆದ ಜನವರಿ 6-2025 ರಂದು ಮುಖ್ಯಮಂತ್ರಿಗಳು ಉದ್ಘಾಟಿಸುವ ಮೂಲಕ ಚಾಲನೆ ನೀಡಿದ್ದಾರೆ.

ಆ ವೇದಿಕೆಯಲ್ಲಿ ತಾವು ಮಾತನಾಡಿದ ಸಂದರ್ಭದಲ್ಲಿ ಮಾರ್ಚ್ 2025ರ ಒಳಗೆ ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿಯ ಈ ಮೂರು ನಿಗಮಗಳಲ್ಲಿ ಈ ಯೋಜನೆ ಜಾರಿಗೆ ತರಬೇಕೆಂದು ಹೇಳಿದ್ದೀರಿ.

ಆದರೆ, ಈಗಾಗಲೇ ಸುಮಾರು 8 ತಿಂಗಳುಗಳು ಕಳೆದಿದ್ದು, ಈ ಮೂರು ನಿಗಮಗಳ ನೌಕರರು ಮತ್ತು ಕುಟುಂಬ ಸದಸ್ಯರು ಯಾವಾಗ ನಮ್ಮ ನಿಗಮಕ್ಕೆ ಈ ನಗದು ರಹಿತ ಆರೋಗ್ಯ ಭಾಗ ಯೋಜನೆ ಜಾರಿಗೆ ಬರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಆದ್ದರಿಂದ ಕೆಎಸ್ಆರ್ಟಿಸಿ ನಿಗಮದಲ್ಲಿ ಜಾರಿಗೆ ತಂದಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಈ ಮೂರು ಸಾರಿಗೆ ನಿಗಮಗಳಲ್ಲಿ ಶೀಘ್ರವಾಗಿ ಜಾರಿಗೆ ತರಬೇಕೆಂದು ಸಮಸ್ತ ಸಾರಿಗೆ ನೌಕರರ ಮತ್ತು ಕುಟುಂಬ ಸದಸ್ಯರ ಪರವಾಗಿ ಮನವಿ ಮಾಡಿದ್ದಾರೆ.

ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರಶೇಖರ್‌ ನೇತೃತ್ವದಲ್ಲಿ ಪದಾಧಿಕಾರಿಗಳು ಸಲ್ಲಿಸಿದ ಮನವಿ ಸಸ್ವೀಕರಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು, ನಾವು ಈಗಾಗಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಡಿಸೆಂಬರ್‌ ವೇಳೆಗೆ ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿಯ ಮೂರು ನಿಗಮಗಳಲ್ಲಿ ಎಚ್‌ಆರ್‌ಎಂಎಸ್‌ (HRMS) ಪೂರ್ಣ ಪ್ರಮಾಣದಲ್ಲಿ ಅಳವಡಿಕೆ ಆಗಲಿದ್ದು, 2026ರ ಜನವರಿ ಮೊದಲ ವಾರದಲ್ಲೇ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

Advertisement

ಅಲ್ಲದೆ ಏನು ಕೆಎಸ್‌ಆರ್‌ಟಿಸಿ ನಿಗಮದಂತೆ ಈ ಮೂರು ನಿಗಮಗಳ ನೌಕರರಿಗೆ ಯೋಜನೆಯನ್ನು ವಿಧಾನಸೌಧದಲ್ಲೇ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವ ಮೂಲಕ ರಹಿತ ವೈದ್ಯಕೀಯ ಚಿಕಿತ್ಸೆಗೆ ಚಾಲನೆ ನೀಡುವರು ಎಂದು ತಿಳಿಸಿದ್ದಾರೆ.

ಕೂಟದ ಪದಾಧಿಕಾರಿಗಳಾದ ಲೋಕೇಶ್‌, ಶ್ರೀನಿವಾಸ್‌, ಅಂಬರೀಶ್‌ ಸೇರಿದಂತೆ ಹಲವು ಇದ್ದರು.

Megha
the authorMegha

Leave a Reply

error: Content is protected !!