ಬೆಂಗಳೂರು: ಬೆಂಗಳೂರಿನ ಸಮಸ್ತ ನಾಗರಿಕ ಬಂಧುಗಳಲ್ಲಿ ಮನವಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಎಲ್ಲಾ ಜನತೆಗೂ ಕರೆ ನೀಡಿದ್ದಾರೆ.
ಹಾಗಾಗಿ, ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು ಎಂದು ಹೇಳಿದ್ದಾರೆ.
ಇನ್ನು ನೀವು ಕೂಡ ಬಿಬಿಎಂಪಿಯ ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ಕೆಳಗಿನ ಲಿಂಕ್ ನಲ್ಲಿ ದಾಖಲಿಸಿಕೊಳ್ಳಬಹುದು.
https://register.quarantinesquad.in/#/p/register
Ella aythu antha higa illige bandu nintide