ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸ್ಫೋಟಕ ತಿರುವು- ಸಂತ್ರಸ್ತೆ ಜತೆಗಿದ್ದವನೂ ಕಾಮುಕ


ಕೆಎಸ್ಆರ್ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ.
ಸಂತ್ರಸ್ತೆ ನ್ಯಾಯಾಧೀಶರ ( Magistrate) ಮುಂದೆ ನೀಡಿದ ಹೇಳಿಕೆಯನ್ನಧಾರಿಸಿ ಆಕೆ ಜೊತೆಗೆ ಊಟಕ್ಕೆ ಬಂದಿದ್ದ ಸ್ನೇಹಿತನನ್ನ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ತಲುಪಿದೆ.
ನನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನ: ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ ಹೇಳಿಕೆಯಲ್ಲಿ, ಜೊತೆಗಿದ್ದ ಸಹಪಾಠಿ ತನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ. ಈ ಹೇಳಿಕೆಯನ್ನಾಧರಿಸಿ ಊಟದ ಸಮಯದಲ್ಲಿ ಜೊತೆಗಿದ್ದ ಸಹಪಾಠಿಯನ್ನು 6ನೇ ಆರೋಪಿಯಾಗಿ ಬಂಧಿಸಲಾಗಿದೆ.
ಕಳೆದ ಶುಕ್ರವಾರ ಜಲೇಶ್ವರದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು.
ಆ ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಇನ್ನು ಘಟನೆ ಬಳಿಕ ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು.
ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ 6ನೇ ಆರೋಪಿಯೇ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

Related
