NEWSದೇಶ-ವಿದೇಶಸಿನಿಪಥ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಗಾಯಕಿ ಎಸ್‌. ಜಾನಕಿ ಅಮ್ಮ ಆರೋಗ್ಯವಾಗಿದ್ದಾರೆ

ವಿಜಯಪಥ ಸಮಗ್ರ ಸುದ್ದಿ

ಚನ್ನೈ: ದಕ್ಷಿಣ ಭಾರತದ ಚಲನಚಿತ್ರಗಳ ಹೆಸರಾಂತ  ಹಿನ್ನೆಲೆ ಗಾಯಕಿ  ಎಸ್.ಜಾನಕಿ ಅಮ್ಮ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಸುಳ್ಳು, ಅಮ್ಮ ಆರೋಗ್ಯವಾಗಿದ್ದಾರೆ ಎಂದು ಮುರಳಿ ಕೃಷ್ಣ  ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಹರಡುತ್ತಿದ್ದು ಅದಕ್ಕೆ ಅಭಿಮಾನಿಗಳು ಕಿವಿಗೊಡಬಾರದು ಎಂದು ಜಾನಕಿ ಅವರ  ಮಗ ಮುರಳಿ ಕೃಷ್ಣ  ಮನವಿ ಮಾಡಿದ್ದಾರೆ.

ಅಮ್ಮ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಜತೆಗೆ ತುಂಬಾ ಚೆನ್ನಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

1957 ರಲ್ಲಿ ‘ಕೊಂಜುಮ್ ಸಲಂಗೈ’ ಚಿತ್ರದ “ಸಿಂಗರವೆಲೆನ್ ದೇವಾ” ಹಾಡಿನೊಂದಿಗೆ ತಮಿಳಿನ ಅತ್ಯಂತ ಪ್ರೀತಿಯ ಹಿನ್ನೆಲೆ ಗಾಯಕರಲ್ಲಿ ಒಬ್ಬರಾದ ಜಾನಕಿ ಅಮ್ಮ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.  ಅಂದಿನಿಂದ ನಿರಂತರವಾಗಿ  ಅರವತ್ತು ವರ್ಷಗಳ ಕಾಲ ಸಂಗೀತ ಲೋಕದಲ್ಲಿ ಛಾಪು ಮೂಡಿಸಿ 2017 ರಲ್ಲಿ ನಿವೃತ್ತರಾಗಿದ್ದಾರೆ. ಅದರೆ ಸಿನಿಮಾಗಳಿಗೆ ಹಾಡುವುದನ್ನು ನಿಲ್ಲಿಸಿ ಯುವ ಪ್ರತಿಭೆಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಈ 60 ವರ್ಷದ ಅವರ ಸಂಗೀತ ಪಣದಲ್ಲಿ ಜಾನಕಿ ಅಮ್ಮ 17 ಭಾರತೀಯ ಭಾಷೆಗಳಲ್ಲಿ 48,000 ಸಾವಿರ ಹಾಡುಗಳನ್ನು ಹಾಡಿದ್ದಾರೆ  ಎಂದು  ಹೇಳುವುದೇ ಯುವ  ಗಾಯಕರಿಗೆ  ದೊಡ್ಡ ಸ್ಫೂರ್ತಿಯಾಗಿದೆ.

 

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ