CRIMENEWSನಮ್ಮರಾಜ್ಯ

KSRTC ಶಿರಾ: ಬಸ್‌ ಡೋರ್‌ ಕಿತ್ತುಹಾಕಿ ಡ್ಯೂಟಿ ನಿರತ ಚಾಲಕ ಮೇಲೆ ಹಲ್ಲೆ- ಆದರೂ FIR ದಾಖಲಿಸದ ಪೊಲೀಸರು ಹೇಳಿದ್ದೇನು !?

ಕರ್ತವ್ಯ ನಿರತ KSRTC ಬಸ್‌ ಚಾಲಕನ ಮೇಲೆ ಹಲ್ಲೆ ಮಾಡಿದ ವ್ಯಕ್ತಿ.
ವಿಜಯಪಥ ಸಮಗ್ರ ಸುದ್ದಿ

ಶಿರಾ: ಹೆಂಡತಿ ಮಕ್ಕಳ ಜತೆಗೆ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡಬೇಕಾದ ಸಮಯದಲ್ಲಿ ಕರ್ತವ್ಯ ನಿಷ್ಠೆ ಮೆರೆಯುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಮಸ್ತ ಅಧಿಕಾರಿಗಳು /ನೌಕರರನ್ನು ಶ್ಲಾಘಿಸಬೇಕಾದ ಸರ್ಕಾರ ಅವರ ಬಗ್ಗೆ ಅಸಡ್ಡೆ ತೋರುತ್ತಿರುವುದು ಭಾರಿ ಖೇದಕರ ಸಂಗತಿ.

ಹಬ್ಬ ಹರಿದಿನಗಳಲ್ಲೂ ಕುಟುಂಬದಿಂದ ದೂರವಾಗಿ ಕಾಯಕದಲ್ಲಿ ನಿರತರಾಗಿರುವ ಚಾಲನಾ ಸಿಬ್ಬಂದಿಗಳ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದರೂ ಅಂಥ ಆರೋಪಿಗಳ ಪರವಾಗಿ ನಿಲ್ಲುವ ರಾಜಕಾರಣಿಗಳಿಂದ ಮನಸ್ಸಿಗೆ ಭಾರಿ ನೋವಾಗುತ್ತದೆ.

ಶಿರಾ ಬಸ್‌ ನಿಲ್ದಾಣದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ್ದು ಅಲ್ಲದೆ ಬಸ್‌ನ ಚಾಲಕರ ಡೋರ್‌ಅನ್ನು ಕಿತ್ತುಹಾಕಿ ಅನ್ಯಕೋಮಿನ ವ್ಯಕ್ತಿಯೊಬ್ಬ ಭಾರಿ ದುರ್ವತನೆ ತೋರಿರುವುದು ಸೋಮವಾರ ನಡೆದಿದೆ.

ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ಕೊಡಲು ಹೋದರೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಘಟನೆ ಏನು?: ಸಂಸ್ಥೆಯ ಶಿರಾ ಘಟಕ ಬಸ್‌ ನಿಲ್ದಾಣಕ್ಕೆ ಬಂದಿದೆ ಈ ವೇಳೆ ಮುಸ್ಲಿಂ ವ್ಯಕ್ತಿಯೊಬ್ಬ ಬಂದು ಈ ಬಸ್‌ ಎಲ್ಲಿಗೆ ಹೋಗುತ್ತದೆ ಎಂದು ಚಾಲಕರನ್ನು ವಿಚಾರಿಸಿದ್ದಾನೆ. ಆಗ ಚಾಲಕ ಬಸ್‌ ಎಲ್ಲಿಗೆ ಹೋಗುತ್ತದೆ ಅಂತ ಬೋರ್ಡ್‌ ಹಾಕಿದೆ ನೋಡಿ ಎಂದು ಹೇಳಿದ್ದಾರೆ. ಅಷ್ಟಕ್ಕೆ ಈ ಕಿಡಿಗೇಡಿ ಪ್ರಯಾಣಿಕ ಚಾಲಕನ ಮೇಲೆ ಹಲ್ಲೆ ಮಾಡಿದ್ದು ಅಲ್ಲದೆ ಚಾಲಕರ ಡೋರ್‌ ಕಿತ್ತು ಬೀಸಾಕಿದ್ದಾನೆ.

ಈ ಎಲ್ಲವನ್ನು ಗಮನಿಸಿದ ಪ್ರಯಾಣಿಕರು ಘಟನೆಯನ್ನು ವಿಡಿಯೋ ಮಾಡಿದ್ದಾರೆ. ಬಳಿಕ ಚಾಲಕ ಪೊಲೀಸ್‌ ಠಾಣೆಗೆ ದೂರು ಕೊಡಲು ಹೋಗಿದ್ದಾರೆ. ಆದರೆ, ಇಲ್ಲಿನ ಸ್ಥಳೀಯ ಕಾಂಗ್ರೆಸ್‌ನ ಹಿರಿಯ ರಾಜಕಾರಣಿಯೊಬ್ಬರು ಠಾಣೆಗೆ ಫೋನ್‌ ಮಾಡಿ ದೂರು ದಾಖಲಿಸಿಕೊಳ್ಳಬೇಡ, ಜತೆಗೆ ಹಲ್ಲೆ ಮಾಡಿರುವ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ಹಾಕಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಶಿರಾದ ಈ ಹಿರಿಯ ರಾಜಕಾರಣಿಯೇ ದೂರು ತೆಗೆದುಕೊಳ್ಳಬೇಡ ಎಂದು ಹೇಳಿದ ಮೇಲೆ ಪೊಲೀಸರು ಕೂಡ ದೂರು ತೆಗೆದುಕೊಳ್ಳದೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಚಾಲಕರಿಗೇ ಬುದ್ಧಿ ಹೇಳಿ ವಾಪಸ್‌ ಕಳಿಸಿದ್ದಾರಂತೆ.

ಸರ್ಕಾರಿ ಬಸ್‌ನ ಡೋರ್‌ ಕಿತ್ತುಹಾಕಿ ಡ್ಯೂಟಿ ಮೇಲೆ ಇದ್ದ ಸರ್ಕಾರಿ ನೌಕರರೊಬ್ಬರ ಮೇಲೆ ಹಲ್ಲೆ ಮಾಡಿದರೂ ಕೂಡ ಅಂತ ವ್ಯಕ್ತಿಯ ವಿರುದ್ಧ ಈ ಕಾಂಗ್ರೆಸ್ ಸರ್ಕಾರ ಎಫ್‌ಐಆರ್‌ ದಾಖಲಿಸದಂತೆ ನೋಡಿಕೊಳ್ಳುತ್ತದೆ ಎಂದರೆ ಎಂಥ ಸರ್ಕಾರ ರಾಜ್ಯದಲ್ಲಿದೆ ಎಂಬುವುದು ಜನಸಾಮಾನ್ಯರಿಗೆ ಗೊತ್ತಾಗುವುದಿಲ್ಲವೇ?

ಇನ್ನು ಹಲ್ಲೆಗೊಳಗಾದ ಕೆಎಸ್‌ಆರ್‌ಟಿಸಿ ಸಂಸ್ಥೆಯ ಬಸ್‌ ಚಾಲಕನಿಗೇ ಸಂಸ್ಥೆಯ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ. ಅಂದರೆ ಇಲ್ಲಿ ಅನ್ಯಕೋಮಿನ ವ್ಯಕ್ತಿ ಕಾನೂನು ಬಾಹಿರವಾಗಿ ನಡೆದುಕೊಂಡರು ಆತನ ವಿರುದ್ಧ ದೂರು ದಾಖಲಿಸಲಾಗದ ಪರಿಸ್ಥಿತಿ ರಾಜ್ಯದಲ್ಲಿ ಇರುವುದು ದುರಂತವಲ್ಲದೆ ಮತ್ತೇನು?

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ