CRIMENEWSನಮ್ಮರಾಜ್ಯ

ಬನ್ನೂರು ಭ್ರೂಣ ಪರೀಕ್ಷೆ ಕೇಂದ್ರದ ಪ್ರಕರಣ: ಕಿಂಗ್ ಪಿನ್ ಶ್ಯಾಮಲಾ ಓದಿದ್ದು ಬಿಎಸ್ಸಿ ನರ್ಸಿಂಗ್- ನರ್ಸಿಂಗ್ ಹೋಂ ತೆರೆದು ದಂಧೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಪರೀಕ್ಷೆ ( Fetal Tests) ಕೇಂದ್ರದ ಪ್ರಕರಣದಲ್ಲಿ ಕಿಂಗ್ ಪಿನ್ ಶ್ಯಾಮಲಾ ಓದಿದ್ದು ಬಿಎಸ್ಸಿ ನರ್ಸಿಂಗ್. ಓದು ಮುಗಿಸಿದ ಕೂಡಲೇ ಈಕೆ ಬನ್ನೂರಿನಲ್ಲೇ ನರ್ಸಿಂಗ್ ಹೋಂ ಆರಂಭಿಸಿದ್ದಳು.

ಬನ್ನೂರಿನ ಮಳವಳ್ಳಿ-ಮೈಸೂರು ಮುಖ್ಯ ರಸ್ತೆಯಲ್ಲಿ 15 ಬೆಡ್‌ಗಳ ಆಸ್ಪತ್ರೆ ಆರಂಭಿಸಿ ಅಲ್ಲಿ ಭ್ರೂಣ ಪರೀಕ್ಷೆ ದಂಧೆ ನಡೆಸುತ್ತಿದ್ದಳು. ಇದುವರೆಗೂ‌ 200ಕ್ಕೂ ಹೆಚ್ಚು ಭ್ರೂಣ ಪರೀಕ್ಷೆಯನ್ನು ಈ ಆಸ್ಪತ್ರೆಯಲ್ಲಿ ನಡೆಸಲಾಗಿದೆ ಎಂದು ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ.

ಶ್ಯಾಮಲಾ ತಮ್ಮ ಗೋವಿಂದರಾಜು ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದ. ಏಜೆಂಟ್ ಪುಟ್ಟರಾಜು ಮೂಲಕ ಗಿರಾಕಿಗಳನ್ನು ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆಸುತ್ತಿದ್ದ ಎಂದು ತಿಳಿದು ಬಂದಿದೆ.

ಈ ಪ್ರಕರಣ ಸಂಬಂಧ ಸಾಲಿಗ್ರಾಮ ತಾಲೂಕಿನ ಬೇರ್ಯ ಮೂಲದ ಶಿವಕುಮಾರ್, ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದ ಹರೀಶ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಮಧ್ಯವರ್ತಿ ಪುಟ್ಟರಾಜು ಎಸ್ಕೇಪ್ ಆಗಿದ್ದಾನೆ. ಈ ಪ್ರಕರಣದಲ್ಲಿ ಒಟ್ಟು ಐವರನ್ನು ಬಂಧಿಸಲಾಗಿದೆ.

ಇನ್ನು ಆರೋಪಿಗಳು ಒಂದು ಭ್ರೂಣಪತ್ತೆಗೆ 25 ರಿಂದ 35 ಸಾವಿರ ರೂಪಾಯಿ ಚಾರ್ಜ್ ಮಾಡುತ್ತಿದ್ದರು. ಆಸ್ಪತ್ರೆಯಿಂದ ಕಾರಿನಲ್ಲಿ ಸ್ಕ್ಯಾನಿಂಗ್ ಮಿಷಿನ್ ತಂದು ಭ್ರೂಣ ಪತ್ತೆ ಮಾಡಲಾಗುತ್ತಿತ್ತು. ಶ್ಯಾಮಲಾ ಮನೆಯಲ್ಲಿಯೇ ಸ್ಕ್ಯಾನಿಂಗ್ ಮಿಷಿನ್ ಕೂಡ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬನ್ನೂರು ಸಮೀಪದಲ್ಲಿರುವ ಹುಣಗನಹಳ್ಳಿ ವ್ಯಾಪ್ತಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಮಾಡಲಾಗುತ್ತಿತ್ತು. ದಾಳಿ ವೇಳೆ 4 ಗರ್ಭಿಣಿಯರು ಭ್ರೂಣ ಲಿಂಗ ಪತ್ತೆಗೆ ಹಾಜರಿದ್ದರು. ಈ ಕೇಂದ್ರದಲ್ಲಿ ಸ್ಕ್ಯಾನಿಂಗ್‌ಗೆ ಬಳಕೆ ಮಾಡುವ ಉಪಕರಣವು ಇತ್ತು. ಈ ಹಿನ್ನೆಲೆಯಲ್ಲಿ ಹೆರಿಗೆ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ