NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಪರಿಷ್ಕೃತ ತುಟ್ಟಿಭತ್ಯೆ, HRA ಹಿಂಬಾಕಿ ಪಾವತಿ ಕುರಿತು ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ಮೂಲ ತುಟ್ಟಿಭತ್ಯೆ, ಪರಿಷ್ಕೃತ ಮನೆ ಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ ಭತ್ಯೆ ಹಿಂಬಾಕಿ ಜತೆಗೆ 01.07.2024 ರಿಂದ ಹಾಗೂ 01.01.2025 ರಿಂದ ಪರಿಷ್ಕರಿಸಲಾದ ತುಟ್ಟಿಭತ್ಯೆ ದರಗಳ ಹಿಂಬಾಕಿ ಮೊತ್ತ ಪಾವತಿ ಬಗ್ಗೆ ಸಂಸ್ಥೆ ಎಂಡಿ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇದೇ ಅ.17ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಪ್ರಿಯಾಂಗಾ ಅವರು ಆದೇಶ ಹೊರಡಿಸಿದ್ದು, ಇದನ್ನು ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಪ್ರಾದೇಶಿಕ ಕಾರ್ಯಾಗಾರ, ಕಾರ್ಯ ವ್ಯಸ್ಥಾಪಕರು, ಕಾರ್ಯ ನಿರ್ವಾಹಕ ಅಭಿಯಂತರರು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಆಗಸ್ಟ್-2024 ರಿಂದ ಜೂನ್-2025ರ ವರೆಗಿನ 11 ತಿಂಗಳುಗಳ ಅವಧಿಯಲ್ಲಿ ಸೇವಾ ನಿರತ ಮತ್ತು ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ ನೌಕರರಿಗೆ ಮೂಲ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆಗಳ ಮತ್ತು ತುಟ್ಟಿ ಭತ್ಯೆ ಹಿಂಬಾಕಿಗಳನ್ನು ಪಾವತಿಸುವುದು ಬಾಕಿ ಇದೆ.

ಇನ್ನು ಈಗಾಗಲೇ ಆಗಸ್ಟ್‌ -2024 ಈ 1 ತಿಂಗಳ ಹಿಂಬಾಕಿ ಪಾವತಿಸಲಾಗಿದೆ. ಅದರಂತೆ ಸೆಪ್ಟೆಂಬರ್-2024 ರ ಮಾಹೆಯ ಹಿಂಬಾಕಿ ಮೊತ್ತವನ್ನು ಈ ಕೆಳಗಿನಂತೆ ಪಾವತಿಸಲು ಸೂಕ್ತಾಧಿಕಾರಿಗಳು ಆದೇಶಿಸಿದ್ದಾರೆ.

ಪ್ರಸ್ತುತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ಸಿಬ್ಬಂದಿಗಳ ಸೆಪ್ಟೆಂಬರ್-2024ರ ಮಾಹೆಯ ಒಂದು ತಿಂಗಳ ಈ ಮೇಲಿನ ಹಿಂಬಾಕಿ ಮೊತ್ತವನ್ನು ಅಕ್ಟೋಬರ್-2025ರ ವೇತನದಲ್ಲಿ ಸೇರಿಸಿ ಪಾವತಿಸುವುದು. ಇನ್ನೂಳಿದ 9 ತಿಂಗಳುಗಳ ಹಿಂಬಾಕಿ ಪಾವತಿಯ ಕುರಿತು ನಂತರ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಅಕ್ಟೋಬರ್-2025ರ ಮಾಹೆಯಿಂದ ಮುಂದಕ್ಕೆ ಸೇವಾ ವಿಮುಕ್ತಿ ಹೊಂದುವವರಿಗೆ ಸೆಪ್ಟೆಂಬರ್-2024ರ ರಿಂದ ಜೂನ್-2025ರ ವರೆಗಿನ 10 ತಿಂಗಳುಗಳ ಹಿಂಬಾಕಿ ಮೊತ್ತವನ್ನು ನಿವೃತ್ತ ಮಾಹೆಯಲ್ಲಿ ವೇತನದಲ್ಲಿ ಸೇರಿಸಿ ಪಾವತಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ