NEWSನಮ್ಮರಾಜ್ಯ

ಗುಡ್ಡ ಕುಸಿದು 4ಮನೆಗಳು ನೆಲಸಮ; ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಭಾರಿ ಮಳೆಯಿಂದ ಗುರುಪುರದ ಬಂಗ್ಲೆಗುಡ್ಡ ಕುಸಿದು ನಾಲ್ಕು ಮನೆಗಳು ನೆಲಸಮಗೊಂಡಿದ್ದು, ಮಣ್ಣಿನಡಿ ಇಬ್ಬರು ಮಕ್ಕಳು ಸಿಲುಕಿರುವ ಘಟನೆ ನಡೆದಿದೆ.

ಇಂದು ಮುಂಜಾನೆಯಿಂದ ಸುರಿದ ಮಳೆಗೆ ಗುಡ್ಡ ಕುಸಿದಿದ್ದರಿಂದ ಮನಗಳು ನೆಲಕ್ಕುರುಳಿವೆ. ಇದರಿಂದ ಮನೆಯಲ್ಲಿದ್ದ ಇಬ್ಬರು ಮಕ್ಕಳು ಅದೇ ಮಣ್ಣಿನಡಿ ಸಿಲುಕಿದ್ದು, ಆ ಮಕ್ಕಳ ರಕ್ಷಣೆ ಕಾರ್ಯದಲ್ಲಿ ಎನ್‌ಡಿಆರ್‌ಎಫ್‌ ತಂಡ ತೊಡಗಿದೆ.

ಈ ಮಕ್ಕಳ ಮೇಲೆ 30 ಅಡಿಯಷು ಮಣ್ಣುಬಿದ್ದಿದೆ ಎಂದು ಹೇಳಲಾಗುತ್ತಿದೆ. 4ವರ್ಷದ  ಮಗು ಸೇರಿ ಇಬ್ಬರು ಮಕ್ಕಳು ಸಿಲುಕಿದ್ದು, ಮಧ್ಯಾಹ್ನ ಸುಮಾರು 12.30ರಲ್ಲಿ ಘಟನೆ ನಡೆದಿದೆ. ಆದರೆ  ಈವರೆಗೂ (3.40 ಗಂಟೆ) ಮಕ್ಕಳ ಸುಳಿವು ಸಿಕ್ಕಿಲ್ಲ.

ಇನ್ನು ಇದರಿಂದ ಪಾಲಕರು ಕಂಗಾಲಾಗಿದ್ದಾರೆ.  ಈ ನಡುವೆ ರಕ್ಷಣ ಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ತಂಡ, ಪೊಲೀಸರು ಜೆಸಿಬಿ ಮೂಲಕ ರಕ್ಷಣ ಕೆಲಸವನ್ನು ಚುರುಕುಗೊಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್