NEWSನಮ್ಮರಾಜ್ಯ

ಜುಲೈ 5- ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್‌: 1925 ಹೊಸ ಕೇಸು ಪತ್ತೆ, 38 ಮಂದಿ ಬಲಿ

ಬೆಂಗಳೂರಿನಲ್ಲಿ 1235 ಮಂದಿಗೆ ಸೋಂಕು ದೃಢ, 16 ಮಂದಿ ಇಂದು ಸೋಂಕಿಗೆ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ರಾಜ್ಯದಲ್ಲಿ ಇಂದು ಕೂಡ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, 1925 ಹೊಸ ಸೋಂಕಿತರ ಪತ್ತೆಯಾಗಿದ್ದಾರೆ. ಇನ್ನು ಈವರೆಗೆ ರಾಜ್ಯದಲ್ಲಿ ಒಟ್ಟು 23474 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಇದು 38 ಮಂದಿ ಸೋಂಕಿಗೆ ಬಲಿಯಾಗಿದ್ದು,  ಒಟ್ಟಾರೆ ಈವರೆಗೆ ರಾಜ್ಯದಲ್ಲಿ 377 ಮಂದಿ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಒಟ್ಟು 23,474 ರಲ್ಲಿ 13250 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 373 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಒಟ್ಟಾರೆ 9847 ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ 38 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 16, ಬೀದರ್‌ನಲ್ಲಿ 9, ಚಿಕ್ಕಬಳ್ಳಾಪುರ 2, ಹಾಸನ, ಮೈಸೂರು ಮತ್ತು ಬಳ್ಳಾರಿಯಲ್ಲಿ ತಲಾ ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ 1235, ದಕ್ಷಿಣ ಕನ್ನಡದಲ್ಲಿ 147, ಬಳ್ಳಾರಿಯಲ್ಲಿ 90, ವಿಜಯಪುರ 51,  ಕಲಬುರಗಿ 49, ಉಡುಪಿ ಮತ್ತು ಧಾರವಾಡ ತಲಾ 45,  ಬೀದರ್‌ 29, ಮೈಸೂರು 25, ಹಾವೇರಿ15, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ, ತಲಾ 13,   ಹಾಸನ 14, ಬೆಳಗಾವಿ, ದಾವಣಗೆರೆ ತಲಾ 11, ರಾಯಸೂರು ಮತ್ತು ಮಂಡ್ಯ ತಲಾ 10,   ಚಿಕ್ಕಮಗಳೂರು 9, ಶಿವಮೊಗ್ಗ8, ಗದಗ 7,   ರಾಮನಗರದಲ್ಲಿ 6, ಬಾಗಲಕೋಟೆ 4, ಚಿತ್ರದುರ್ಗ ಜಿಲ್ಲೆಯಲ್ಲಿ 3 ಸೇರಿ ಇಂದು ಒಟ್ಟು  1925 ಮಂದಿಯನ್ನು ಸುತ್ತಿಕೊಂಡಿದೆ ಮಹಾಮಾರಿ ಕೊರೊನಾ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ