NEWSನಮ್ಮಜಿಲ್ಲೆ

ಕೊರೊನಾ ಸೋಂಕಿಗೆ ವೃದ್ಧರಿಬ್ಬರು ಬಲಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ:  ಕೊರೊನಾ‌ ಸೋಂಕಿನಿಂದ ಕಲಬರಗಿ ಜಿಲ್ಲೆಯಲ್ಲಿ ಮತ್ತಿಬ್ಬರು ವೃದ್ಧರು ಮೃತಪಟ್ಟಿರುವುದು ಭಾನುವಾರದ ಕೋವಿಡ್-19 ಬುಲೆಟಿನ್ ವರದಿಯಿಂದ ದೃಢವಾಗಿದೆ.

ಇದರಿಂದ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌27ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ILI ಹಿನ್ನೆಲೆಯೊಂದಿಗೆ ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ ಪ್ರದೇಶದ 69 ವರ್ಷದ ವೃದ್ಧ (P-21318) ಜು.3 ರಂದು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಜು.4 ರಂದು ನಿಧನ ಹೊಂದಿದರು.

ILI ಹಿನ್ನೆಲೆಯೊಂದಿಗೆ ತೀವ್ರ ಜ್ವರ, ಕೆಮ್ಮು ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಶಹಾಬಾದ ಪಟ್ಟಣದ ಮಸ್ಜಿದ್ ಚೌಕ್ ಪ್ರದೇಶದ 66 ವರ್ಷದ ವೃದ್ಧ (P-23288) ಜು.3 ರಂದು ಅಸ್ಪತ್ರೆಗೆ ದಾಖಲಾಗುವ ಮುನ್ನವೆ ನಿಧನ ಹೊಂದಿದ್ದು, ಭಾನುವಾರ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ ಎಂದು ಶರತ್ ತಿಳಿಸಿದರು.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ