NEWSನಮ್ಮರಾಜ್ಯ

ಮೈಸೂರು ಜಿಲ್ಲೆಯ ಹಳ್ಳಿ ಹಳ್ಳಿಯನ್ನು ವಕ್ಕರಿಸುತ್ತಿದೆ ಕೊರೊನಾ

ಎಚ್ಚರ ತಪ್ಪಿದರೆ ನಿಮ್ಮನ್ನೂ ಆವರಿಸಲಿದೆ ವಿಶ್ವಮಾರಿ l  ಗರ್ಭಿಣಿಯರ ಬಗ್ಗೆ ಕಾಳಜಿ ಅಗತ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವಿಶ್ವಮಾರಿ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ಹಳ್ಳಿಹಳ್ಳಿಗಳನ್ನು ತಲುಪಿ ಗ್ರಾಮೀಣರನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಬೆಂಗಳೂರಿನ ಹೇಗೆ ಶರವೇಗದಲ್ಲಿ ಹರಡುತ್ತಿದೆಯೋ ಅದೇ ರೀತಿ ಮೈಸೂರಿನ ಮೂಲೆ ಮೂಲೆಯನ್ನು ಬಿಡದೆ ಅಷ್ಟೇ ಶರವೇಗೆದಲ್ಲಿ ಗ್ರಾಮೀಣ ಪ್ರದೇವನ್ನು ಆವರಿಸಿಕೊಳ್ಳುತ್ತಿದೆ. ಇದರಿಂದ ಜಿಲ್ಲೆಯ ಜನರು ಸ್ವಯಂ ಲಾಕ್‌ ಮಾಡಿಕೊಳ್ಳುತ್ತಿದ್ದಾರೆ.

ಇನ್ನು ಜಿಲ್ಲೆಯ ಬಹುತೇಕ ಗ್ರಾಮಗಳ ಮುಖಂಡರು (ಯಜಮಾನರು) ತಮ್ಮ ಗ್ರಾಮಕ್ಕೆ ಹೊರಗಡೆಯಿಂದ ಬರುವವರನ್ನು ಬಿಟ್ಟುಕೊಳ್ಳುತ್ತಿಲ್ಲ ಮತ್ತೆ ಗ್ರಾಮದಿಂದ ಹೊರ ಗ್ರಾಮಗಳಿಗೆ ಅಥವಾ ಅನ್ಯ ನಗರಕ್ಕೆ ಹೋಗುವುದಕ್ಕೆ ಕಡಿವಾಣ ಹಾಕಿದ್ದಾರೆ.

ಗ್ರಾಮದ ಮುಖಂಡರು ಹಾಕಿರುವ ನಿಬಂಧನೆಯನ್ನು ಮೀರಿ ಹೊರಗಡೆ ಹೋದರೆ ಅಥವಾ ಗ್ರಾಮಕ್ಕೆ ಬಂದರೆ ಅಂಥವರಿಗೆ 5000 ರೂ. ದಂಡ ವಿಧಿಸಲಾಗುವುದು ಎಂದು ಗ್ರಾಮದ ಬೀದಿ ಬೀದಿಗಳಲ್ಲೂ ಡಂಗೂರ ಸಾರಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಹೆಚ್ಚಾಗುತ್ತಿರುವ ಈ ಮಹಾಮಾರಿಯನ್ನು ತಡೆಯಲು ಮುಂದಾಗಿದ್ದಾರೆ.

ಗರ್ಭಿಣಿಯರನ್ನು ಕಾಡುತ್ತಿದೆ
ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ತನ್ನ ರುದ್ರನರ್ತನವನ್ನು ಮುಂದುವರಿಸಿರುವ ಈ ಮಾರಿ ಗರ್ಭಿಣಿಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಆದ್ದರಿಂದ ಚಿಕಿತ್ಸೆ ಅಥವಾ ತಪಾಸಣೆಗೆ ಎಂದು ಆಸ್ಪತ್ರೆಗೆ ತೆರಳುವ ಮುನ್ನ ಗರ್ಭಿಣಿಯರು ಮುಂಜಾಗ್ರತೆ ವಹಿಸುವುದು ಪ್ರಮುಖವಾಗಿದೆ. ಇದರಿಂದ ಕೊರೊನಾ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಇದೆ. ಅವರನ್ನು ನೋಡಿಕೊಳ್ಳುವ ಹೊಣೆ ಕುಟುಂಬದವರಿಗೂ ಇರುವುದರಿಂದ ಈ ಸೋಂಕು ತಡೆಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ.

ಇನ್ನು ಗ್ರಾಮದಲ್ಲಿ ಹೇರಿರುವ ನಿರ್ಬಂಧವನ್ನು ಗ್ರಾಮಸ್ಥರು ತಪ್ಪದೆ ಪಾಲಿಸಿದರೆ ಕೊರೊನಾ ಸೋಂಕನ್ನು ಹೊಡೆದೋಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ನಾವು ಸರ್ಕಾರ ಈ ಬಗ್ಗೆ ಎಚ್ಚರ ವಹಿಸಬೇಕು ನಾವೇಕೆ ತೆಗೆದುಕೊಳ್ಳಬೇಕು ಎಂಬ ಭಾವನೆ ಇದ್ದರಿ ಇಂದೇ ಬಿಟ್ಟುಬಿಡಿ ಏಕೆಂದರೆ ಸರ್ಕಾರಗಳು ಆದಾಯದ ಮೂಲವನ್ನು ಹುಡುಕುತ್ತಿವೆಯೇ ಹೊರತು ಜನರ ಆರೋಗ್ಯದ ಕಾಳಜಿಯನ್ನಲ್ಲ. ಹೀಗಾಗಿ ಪ್ರತಿಯೊಬ್ಬರೂ ಸರ್ಕಾರ ನೋಡಿಕೊಳ್ಳುವುದು ಎಂಬುದನ್ನು ಬಿಟ್ಟು ನಿಮ್ಮ ಆರೋಗ್ಯವನ್ನು ನೀವೆ ಕಾಪಾಡಿಕೊಳ್ಳಬೇಕು.

ಜಿಲ್ಲೆಯ ಒಟ್ಟು 690 ಮಂದಿಗೆ ಸೋಂಕು
ಇನ್ನು ಜಿಲ್ಲೆಯಲ್ಲಿ ಶುಕ್ರವಾರ 51 ಜನರಿಗೆ ಕೊರೊನಾ ವಕ್ಕರಿಸಿದ್ದು, ಒಟ್ಟಾರೆ 690 ಮಂದಿ ಈವರೆಗೆ ಸೋಂಕಿಗೆ ಒಳಗಾಗಿದ್ದಾರೆ. ಇವರಲ್ಲಿ 363 ಜನ ಗುಣಮುಖರಾಗಿ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 307 ಜನ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 20 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ