NEWSಕೃಷಿನಮ್ಮಜಿಲ್ಲೆರಾಜಕೀಯ

ಕಾವೇರಿ, ಕಬಿನಿ ನೀರು ಬಿಡುವ ಸಂಬಂಧ ಶೀಘ್ರದಲ್ಲೇ ಸಭೆ: ಸಚಿವ ಸೋಮಶೇಖರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಕಾವೇರಿ ಮತ್ತು ಕಬಿನಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕಾವೇರಿ ಮತ್ತು ಕಬಿನಿ ಜಲಾಶಯಗಳ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆದಷ್ಟು ಬೇಗ ಕರೆಯಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಟಿ.ಸೋಮಶೇಖರ್ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತ ಮಾಡಿಕೊಂಡಿರುವ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದ ಅವರು, ನಂತರ ಮಾತನಾಡಿ ಕೆ.ಆರ್.ಎಸ್. ಜಲಾಯಶಯ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ವ್ಯಾಪ್ತಿಗೆ ಬರುತ್ತದೆ. ಅವರೊಂದಿಗೆ ಚರ್ಚಿಸಿ, ಕಬಿನಿ ಜಲಯಾಶಯದ ಸಭೆಯನ್ನು ಸಹ ನಡೆಸಲಾಗುವುದು ಎಂದರು.

ಮೆಕ್ಕೆಜೋಳ ಬೆಳೆದ ರೈತರಿಗೂ ಲಾಕ್‍ಡೌನ್ ಸಂದರ್ಭದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 5000 ರೂ.ಗಳ ಪ್ರೋತ್ಸಾಹಧನ ಘೋಷಣೆ ಮಾಡಿದೆ. ಈ ಮೊತ್ತ ಬೇಗ ರೈತರಿಗೆ ತಲುಪುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆಬೀಜ, ರಸಗೊಬ್ಬರ ಮುಂತಾದವುಗಳು ಕೊರತೆಯಾಗಬಾರದು, ಸಕಾಲಕ್ಕೆ ಬಿತ್ತನೆ ಕಾರ್ಯ ನಡೆಸಲು ಎಲ್ಲಾ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೀಡುವ ಪರಿಹಾರ ಇನ್ನೂ ಕೆಲವು ಕುಟುಂಬಂಗಳಿಗೆ ಕೊಡಬೇಕಾಗಿದೆ. ತಕ್ಷಣ ಅವರಿಗೆ ಪರಿಹಾರ ಮೊತ್ತ ಸಿಗಬೇಕು ಎಂದರು.

ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ
ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ. ಜಿಲ್ಲೆಗೆ 1,04,900 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈಗಾಗಲೇ 98,920 ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಈ ಪೈಕಿ 48,079 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದ್ದು, ಇನ್ನೂ 50,841 ದಾಸ್ತಾನು ಇದೆ ಎಂದರು.

ಜಿಲ್ಲೆಗೆ ಒಟ್ಟು 91,831 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದೆ. ಹಲವಾರು ರೈತರು ತಮ್ಮಲ್ಲೇ ಇರುವ ಬಿತ್ತನೆ ಬೀಜವನ್ನು ಬಳಸುತ್ತಾರೆ. ಈ ಬಿತ್ತನೆ ಬೀಜದ ಬದಲಿ ಅನುಪಾತದ ಪ್ರಕಾರ ಪ್ರಸ್ತುತ ಬೇಡಿಕೆಯನ್ನು 37,692 ಕ್ವಿಂಟಾಲ್ ಎಂದು ಅಂದಾಜಿಸಲಾಗಿದೆ. 39,673 ಕ್ವಿಂಟಾಲ್ ದಾಸ್ತಾನು ಈಗಾಗಲೇ ಇರುವುದರಿಂದ ಯಾವುದೇ ಕೊರತೆ ಇಲ್ಲ ಎಂದರು.

ಜಂಟಿ ಕೃಷಿ ನಿರ್ದೇಶಕರಾದ ಡಾ.ಮಹಂತೇಶಪ್ಪ ಮಾತನಾಡಿ 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಪ್ರಮುಖ ಬೆಳೆಗಳು ಭತ್ತ, ಜೋಳ, ರಾಗಿ, ಮುಸುಕಿನ ಜೋಳ, ನವಣೆ, ತೊಗರಿ, ಅಲಸಂದೆ, ಉದ್ದು, ಹೆಸರು, ಅವರೆ, ನೆಲಗಡಲೆ ಮುಂತಾದ ಪ್ರಮುಖ ಬೆಳೆಗಳಿಗೆ ಬಿತ್ತನೆ ಬೀಜವನ್ನು ರೈತರಿಗೆ ನೀಡುವುದರ ಜೊತೆಗೆ ಆನ್‍ಲೈನ್ ಮೂಲಕ ತರಬೇತಿಯನ್ನು ಮಾಡಲಾಗಿದೆ ಎಂದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ