NEWSಕೃಷಿನಮ್ಮರಾಜ್ಯ

ಹೆಚ್ಚಾದ ರೈತರ ಕಿಚ್ಚು: ಇಂದಿನಿಂದ ನ.16ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಾದ್ಯಂತ ಯಾವುದೇ ಪ್ರತಿಭಟನೆ ಮುಷ್ಕರ ಹಾಗೂ ಗುಂಪು ಸೇರುವಿಕೆಯನ್ನು ಇಂದಿನ ರಾತ್ರಿ (ನ.13) 8ಗಂಟೆಯಿಂದ ನ.16ರ ಬೆಳಗ್ಗೆ 8 ಗಂಟೆವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಸಂಗಪ್ಪ ಆದೇಶ ಹೊರಡಿಸಿದ್ದಾರೆ.

ಕಳೆದ ಇದೇ ನ.7 ರಿಂದ ಕಬ್ಬು ಬೆಳೆಗಾರ ರೈತರು ಕಬ್ಬಿನ ಬೆಲೆ ನಿಗದಿ ಮತ್ತು ಇತರೆ ಬೇಡಿಕೆಗಳ ಮುಂದಿಟ್ಟುಕೊಂಡು ಜಿಲ್ಲೆಯದ್ಯಂತ ರಸ್ತಾ ರೋಖೋ ಪ್ರತಿಭಟನೆ ಕೈಕೊಂಡಿದ್ದಾರೆ. ಈ ನಡುವೆ ಇಂದು ಮಹಾಲಿಂಗಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಗೋದಾವರಿ (ಸಮೀರವಾಡಿ) ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ.

ಮುಂದುವರೆದು ಇಂದು ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಗೋದಾವರಿ (ಸಮೀರವಾಡಿ) ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಟ್ರ್ಯಾಕ್ಟರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುತ್ತಿದ್ದು ಇನ್ನೂ ಹೆಚ್ಚಿನ ಹಾನಿ ಮಾಡುವ ಸಂಭವ ಇದೆ.

ಹೀಗಾಗಿ  ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ನಾಗರಿಕರ ಸುರಕ್ಷತೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳ ಸುರಕ್ಷತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಾದ್ಯಂತ ಯಾವುದೇ ಪ್ರತಿಭಟನೆ, ಮುಷ್ಕರ ಹಾಗೂ ಗುಂಪು ಸೇರುವಿಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ