NEWSಬೆಂಗಳೂರು

ವಾಹನಗಳ ಎಂಟ್ರಿ – ಎಕ್ಸಿಟ್ ಪಾಯಿಂಟ್ ವೈಜ್ಞಾನಿಕವಾಗಿ ರೂಪಿಸಿ: ಲೋಖಂಡೆ ಸ್ನೇಹಲ್ ಸುಧಾಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟನ್ನು ವೈಜ್ಞಾನಿಕವಾಗಿ ರೂಪಿಸಿ ಎಂದು ಪೂರ್ವ ನಗರ ಪಾಲಿಕೆ ಅಪರ ಆಯುಕ್ತ (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ಹೇಳಿದ್ದಾರೆ.

ಇಂದು ನಗರ ಪಾಲಿಕೆಯ ಕೆ.ಆರ್.ಪುರಂ ವಲಯ-2ರ ವ್ಯಾಪ್ತಿಯ ಹೊರ ವರ್ತುಲ ರಸ್ತೆ ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್‌ಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಚೆಳ್ಳಕೆರೆ, ಬಾಬುಸಾಪಾಳ್ಯ, ರಾಮಮೂರ್ತಿ ನಗರ ಹಾಗೂ ಕಲ್ಯಾಣ ನಗರದಲ್ಲಿರುವ ಹೊರ ವರ್ತುಲ ರಸ್ತೆಯ ಒಳಬರುವ ಮತ್ತು ಹೊರ ಹೋಗುವ ದಾರಿಗಳು ತುಂಬಾ ಕಿರಿದಾಗಿದ್ದು ಹಾಗೂ ಅವೈಜ್ಞಾನಿಕವಾಗಿ ರೂಪಿಸಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿರುವುದನ್ನು ಗಮನಿಸಿದ್ದೇನೆ.

ಹೀಗಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಮತ್ತು ನಗರ ಪಾಲಿಕೆ ಇಂಜಿನಿಯರಿಂಗ್ ಇಲಾಖೆ ಸಮನ್ವಯ ಸಾಧಿಸಿಕೊಂಡು ಹೊರ ವರ್ತುಲ ರಸ್ತೆಯ ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್‌ಗಳನ್ನು ಸರಿಯಾಗಿ ಅಭಿವೃದ್ಧಿಪಡಿಸುವ ಮೂಲಕ ವಾಹನ ದಟ್ಟಣೆ ತಗ್ಗಿಸಿ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ರಾಮಮೂರ್ತಿ ನಗರ ಜಂಕ್ಷನ್ ಪರಿಶೀಲಿಸಿದ ಅಪರ ಆಯುಕ್ತರು ಪ್ರಮುಖ ಜಂಕ್ಷನ್‌ಗಳಲ್ಲೇ ಹೆಚ್ಚು ದಟ್ಟಣೆ ಉಂಟಾಗುತ್ತಿದ್ದು, ಸರಿಯಾದ ಕ್ಯಾರೇಜ್ ವೇ, ಪಾದಚಾರಿ ಮಾರ್ಗ ಅಭಿವೃದ್ಧಿ, ಹಾಗೂ ಮಲ್ಟಿ ಮೋಡಲ್ ಕನೆಕ್ಟಿವಿಟಿ ಸೌಲಭ್ಯ ಕಲ್ಪಿಸುವ ಮೂಲಕ ಜಂಕ್ಷನ್ ಅಭಿವೃದ್ಧಿ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ನಡೆದ ಪರಿಶೀಲನೆಯಲ್ಲಿ ಮುಖ್ಯ ಅಭಿಯಂತರರಾದ ಕೃಷ್ಣಮೂರ್ತಿ, ಕಾರ್ಯಪಾಲಕ ಅಭಿಯಂತರರಾದ ಭಾಗ್ಯಮ್ಮ, ಗಿರೀಶ್ ಸಂಚಾರಿ ವೃತ್ತ ನಿರೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ಇದ್ದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ