CRIMENEWSನಮ್ಮಜಿಲ್ಲೆ

ಸಿಎಂ ಸಿದ್ದರಾಮಯ್ಯ ಕ್ಷೇತ್ರದ ವರುಣ ಗ್ರಾಪಂ ಕಾರ್ಯದರ್ಶಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ- ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವರುಣ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಮೈಸೂರು ನಗರದ ಹೂಟಗಳ್ಳಿ ನಿವಾಸಿ, ವರುಣ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಿವ್ಯಾ ಆತ್ಮಹತ್ಯೆಗೆ ಯತ್ನಿಸಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ಯದರ್ಶಿ ದಿವ್ಯಾ ಅವರು ಎಂದಿನಂತೆ ಶುಕ್ರವಾರ ಬೆಳಗ್ಗೆ ಕಚೇರಿಗೆ ಬಂದ ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಅಸ್ವಸ್ಥರಾಗಿದ್ದಾರೆ. ಈ ವಿಚಾರವನ್ನು ಡೇಟಾ ಎಂಟ್ರಿ ಆಪರೇಟರ್ ಅವರು ಪಿಡಿಒ ಕುಮಾರ್ ಆರಾಧ್ಯ ಅವರಿಗೆ ತಿಳಿಸಿದ್ದಾರೆ.

ಕೂಡಲೇ ಅವರನ್ನು ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಿದ ಬಳಿಕ ಶನಿವಾರ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಮುಂದುವರಿದಿದ್ದು ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ದಿವ್ಯಾ ಅವರು ಪ್ಯಾರಸಿಟಮಲ್ ಸೇರಿದಂತೆ ಇತರೆ 13 ಮಾತ್ರೆಗಳನ್ನು ಒಟ್ಟಿಗೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಮಾಹಿತಿ ನೀಡಿದ ವೈದ್ಯರು, ದಿವ್ಯಾ ಅವರು ಸೇವಿಸಿದ್ದ ಮಾತ್ರೆಯಲ್ಲಿನ ವಿಷಕಾರಿ ಅಂಶವನ್ನು ಹೊರ ತೆಗೆದಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ನಿವೇಶನವೊಂದರ ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಹದ್ಯೋಗಿ ಜತೆ ಜಟಾಪಟಿ ನಡೆಯುತ್ತಿತ್ತು. ಇದರಿಂದ ಮಾನಸಿಕವಾಗಿ ನೊಂದಿದ್ದ ದಿವ್ಯಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

ಸದ್ಯ ಕಾರ್ಯದರ್ಶಿ ಅವರು ಚೇತರಿಸಿಕೊಳ್ಳುತ್ತಿದ್ದು, ಆತ್ಯಹತ್ಯೆ ಯತ್ನ ಕಾರಣದ ಬಗ್ಗೆ ಪೊಲೀಸರಿಗೆ ಯಾವುದೇ ಹೇಳಿಕೆ ನೀಡಿಲ್ಲ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ