NEWSನಮ್ಮಜಿಲ್ಲೆನಮ್ಮರಾಜ್ಯ

ಜಗದಗಲ ವ್ಯಾಪಿಸುತ್ತಿದೆ ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಸ್ತುತ ಸೌದಿ ಅರೇಬಿಯಾದಿಂದ 8 ಮೆಟ್ರಿಕ್‌ ಟನ್‌, ಯುಎಸ್‌ಎನಿಂದ 5 ಮೆಟ್ರಿಕ್‌ ಟನ್‌ ಹಾಗೂ ಆಸ್ಟ್ರೇಲಿಯಾದಿಂದ 1 ಮೆಟ್ರಿಕ್‌ ಟನ್‌ ತುಪ್ಪಕ್ಕೆ ಬೇಡಿಕೆ ಬಂದಿದ್ದು, ಇಂದಿನಿಂದ (ಮಂಗಳವಾರ ನ.25) ಈ ಮೂರು ದೇಶಗಳಿಗೆ ತುಪ್ಪ ಪೂರೈಕೆಗೆ ಅಧಿಕೃತ ಚಾಲನೆ ನೀಡಿ ಅವರು ಮತನಾಡಿದರು.

ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳಲ್ಲಿ ನಂದಿನಿ ಬ್ರ್ಯಾಂಡ್‌ಗೆ ಡಿಮ್ಯಾಂಡ್‌ ಹೆಚ್ಚಿದೆ.

ಹೀಗಾಗಿಯೇ ನಂದಿನಿ ಯುಎಚ್‌ಟಿ ಟೆಟ್ರಾಪ್ಯಾಕ್‌ ಹಾಲು, ತುಪ್ಪ, ಚೀಸ್‌, ಬೆಣ್ಣೆ, ಐಸ್‌ಕ್ರೀಂ, ಸುವಾಸಿತ ಹಾಲು, ಸಿಹಿ ಉತ್ಪನ್ನ, ಸೇವರಿಸ್‌ ಅನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಇದೀಗ ವಿದೇಶದಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಎಂಎಫ್‌ ಕ್ರಮ ವಹಿಸಿದೆ ಎಂದರು.

2023ರ ಸೆಪ್ಟೆಂಬರ್‌ 9ರಂದು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ದುಬೈ)ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮೊದಲ ʼನಂದಿನಿ ಕೆಫೆ ಮೂʼ ಅನ್ನು ಆರಂಭಿಸಿ, ತುಪ್ಪ, ಬೆಣ್ಣೆ, ಚೀಸ್‌, ಯುಎಚ್‌ಟಿ ಹಾಲು, ಐಸ್‌ಕ್ರೀಂ, ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಲಾಯಿತು. ಅಲ್ಲಿ ನೆಲೆಸಿರುವ ಕನ್ನಡಿಗರು ಸೇರಿದಂತೆ ಅಲ್ಲಿನ ಪ್ರಜೆಗಳು ಕೂಡ ನಮ್ಮ ಕನ್ನಡದ ಬ್ರ್ಯಾಂಡ್‌ ಉತ್ಪನ್ನಗಳನ್ನು ಕೊಳ್ಳಲು ಪ್ರಾರಂಭಿಸಿದ್ದರಿಂದ ಮಾರುಕಟ್ಟೆ ವಿಸ್ತರಣೆಯಾಯಿತು.

ಬಳಿಕ 2025ರ ಆಗಸ್ಟ್‌ 29 ರಿಂದ ಆಗಸ್ಟ್‌ 31ರ ವರೆಗೆ ಯುಎಸ್‌ಎಯಲ್ಲಿನ ಲೇಕ್‌ಲ್ಯಾಂಟ್‌ ಪ್ಲೋರಿಡಾದಲ್ಲಿ ಆಯೋಜಿಸಲಾಗಿದ್ದ ನಾವಿಕ (ನಾವು ವಿಶ್ವ ಕನ್ನಡಿಗರು) ವಿಶ್ವ ಕನ್ನಡ ಸಮಾವೇಶದಲ್ಲಿ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕರು ಪಾಲ್ಗೊಂಡು ಹೊಸ ವಿನ್ಯಾಸದ ನಂದಿನಿ ತುಪ್ಪ ಹಾಗೂ ಸಿಹಿ ಉತ್ಪನ್ನಗಳನ್ನು ಬಿಡುಗಡೆಗೊಳಿಸಿ, ಇಂದಿನಿಂದ ನಂದಿನಿ ಉತ್ಪನ್ನಗಳು ಅಮೆರಿಕಾದಲ್ಲೂ ಲಭ್ಯವಿರುವುದಾಗಿ ಘೋಷಿಸಿದರು.

ವಿಶೇಷವಾಗಿ ನಂದಿನಿ ಪೇಡ, ಮೈಸೂರು ಪಾಕ್‌, ಬರ್ಫಿ ಹಾಗೂ ಸೇವರಿಸ್‌ ಉತ್ಪನ್ನಗಳಿಗೆ ಅಲ್ಲಿ ಹೆಚ್ಚು ಬೇಡಿಕೆಯಿದೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ