NEWSನಮ್ಮಜಿಲ್ಲೆ

ಮದ್ದೂರು ಟಿಬಿ ವೃತ್ತದಿಂದ ಕೊಲ್ಲಿ ವೃತ್ತವರೆಗೆ ರಸ್ತೆ ಅಗಲೀಕರಣ ಕುರಿತು ಸಿಎಂ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಭೆಯಲ್ಲಿ 2025 -26ನೇ ಸಾಲಿನ ವಾರ್ಷಿಕ ಬಜೆಟಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂ ತಯಾರಿಸಲಾಗಿದೆ.

ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನ ನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಅಧಿಕ ವಾಹನ ಸಂಚಾರವಿದ್ದು ಪುರಸಭೆಯ ಸುಪರ್ದಿಯಲ್ಲಿದೆ.

ಬಿಎಂಐಸಿಎಪಿಎ ಅವರು ತಯಾರಿಸಿರುವ ಯೋಜನಾ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.

ಹೀಗಾಗಿ ರಸ್ತೆ ಅಗಲೀಕರಣ ಕಾಮಗಾರಿಯ ಯೋಜನಾ ವರದಿ ಪರಿಶೀಲಿಸಿ, ರಸ್ತೆಯನ್ನು 80 ಅಡಿ ರಸ್ತೆಯಾಗಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ