NEWSನಮ್ಮಜಿಲ್ಲೆನಮ್ಮರಾಜ್ಯ

ಫಾರಂ-4 ಉಲ್ಲಂಘಿಸಿ ಕಾರ್ಯಾಚರಣೆಗೆ ಸಾಥ್‌ ನೀಡುವ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ: ಹಾವೇರಿ ಸಾರಿಗೆ ವಿಭಾಗದ ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅನುಸೂಚಿ ವಾಹನಗಳು Form-4 ವೇಳಾಪಟ್ಟಿ ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿರುವ ಪ್ರಕರಣಗಳಿಗೆ ಸಾಥ್‌ ನೀಡುವ ಭದ್ರತಾ ಸಿಬ್ಬಂದಿ ವಿರುದ್ಧ ಅಗತ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ನ.29ರಂದು ಆದೇಶ ಹೊರಡಿಸಿರುವ ಅವರು, ಈ ವಿಷಯದ ಕುರಿತು ನಿಷ್ಕಾಳಜಿ, ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಲ್ಲಿ ಅಂತಹ ಭದ್ರತಾ ಸಿಬ್ಬಂದಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಏಕೆ ಈ ಆದೇಶ?: ಈ Form-4 ವೇಳಾಪಟ್ಟಿ ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಅನುಸೂಚಿ ವಾಹನಗಳು Form-4 ವೇಳಾಪಟ್ಟಿ ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿರುವ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಸ್ತೆ ಅಪಘಾತಕ್ಕೆ ಮತ್ತು ಸಂಸ್ಥೆಗೆ ನಷ್ಟ ಉಂಟಾಗುವ ಸಾಧ್ಯೆತೆ ಇರುವುದನ್ನು ವ್ಯವಸ್ಥಾಪಕ ನಿರ್ದೇಶಕರು ಗಮನಿಸಿದ್ದಾರೆ.

ಹೀಗಾಗಿ ಈ ಸಂಬಂಧ ಸಂಸ್ಥೆಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿಗಳು ನಮಗೆ ಜ್ಞಾಪನಾ ಪತ್ರ ಹೊರಡಿಸಿದ್ದು, ಸಕಾರಣ ಇಲ್ಲದೆ ನಮೂನೆ-4 ಸಮಯಕ್ಕಿಂತ ಮುಂಚಿತವಾಗಿ ಘಟಕದಿಂದ ವಾಹನ ಹೊರ ಹೋಗದಂತೆ ಹಾಗೂ ಒಳಗೆ ಬರದಂತೆ ಘಟಕದ ಭದ್ರತಾ ಸಿಬ್ಬಂದಿಗಳಿಗೆ ಲಿಖಿತ ಆದೇಶ ಹೊರಡಿಸಲು ನ.26ರಂದು ಸೂಚಿಸಿದ್ದಾರೆ.

ಅದರನ್ವಯ ಪ್ರಸ್ತುತ ಹಾವೇರಿ ವಿಭಾಗದಲ್ಲಿ ಅನುಸೂಚಿ ವಾಹನಗಳು Form-4 ಪ್ರಕಾರ ಘಟಕದಿಂದ ನಿರ್ಗಮನವಾಗುವ ಹಾಗೂ ಘಟಕಕ್ಕೆ ಆಗಮಿಸುವ ಅನುಸೂಚಿವಾರು ಅಧಿಕೃತ ವೇಳಾಪಟ್ಟಿಯನ್ನು ಅಡಕಗೊಳಿಸಿದ್ದು, ಈ ವೇಳಾಪಟ್ಟಿಯಂತೆ ಇಂದಿನಿಂದ ತಮ್ಮ ತಮ್ಮ ಘಟಕಗಳ ಅನುಸೂಚಿ ವಾಹನಗಳನ್ನು ಘಟಕದಿಂದ ಹೊರಗೆ ಬಿಡಲು ಹಾಗೂ ಘಟಕದ ಒಳಗೆ ತೆಗೆದುಕೊಳ್ಳಬೇಕು.

ಮುಖ್ಯವಾಗಿ ಯಾವುದೇ ಅನುಸೂಚಿ ವಾಹನಗಳನ್ನು ಸಕಾರಣಗಳಿಲ್ಲದೆ ನಮೂನೆ-4ರ ಸಮಯಕ್ಕಿಂತ ಮುಂಚಿತವಾಗಿ ಘಟಕದಿಂದ ಹೊರಗೆ ಬಿಡಬಾರು ಹಾಗೂ ನಮೂನೆ-4 ಸಮಯಕ್ಕಿಂತ ಮುಂಚಿತವಾಗಿ ವಾಹನವನ್ನು ಘಟಕದ ಒಳಗೆ ತೆಗೆದುಕೊಳ್ಳಬಾರದು ಹಾಗೂ ಈ ವಿಷಯವನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಗಳು ಆದೇಶ ಹೊರಡಿಸಿದ್ದಾರೆ.

ಅಲ್ಲದೆ ಯಾವುದೇ ಭದ್ರತಾ ಸಿಬ್ಬಂದಿ ಈ ವಿಷಯದ ಕುರಿತು ನಿಷ್ಕಾಳಜಿ, ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಲ್ಲಿ ಅಂತಹ ಸಿಬ್ಬಂದಿಗಳ ವಿರುದ್ಧ ತಕ್ಷಣ ಅಗತ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ನೌಕರರ ವೇತನ ಹೆಚ್ಚಳ ಸಂಬಂಧದ ಹೋರಾಟ ನಿಲ್ಲುವುದಿಲ್ಲ ಹೈ ಕೋರ್ಟ್‌ ನಿರ್ದೇಶನದಂತೆ ಮುಂದುವರಿಯಲಿದೆ- ಚಂದ್ರಶೇಖರ... ಏ.29ರಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ 2024ರ ಜ.1ರಿಂದ ನೌಕರರ ವೇತನ ಹೆಚ್ಚಳ, ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ... ಏ.29ರ ಒಳಗೆ ರೈತರ ಖಾತೆಗೆ ಬಾಕಿ ಹಣ ಜಮಾ ಡಿಸಿ ಭರವಸೆ ಹಿನ್ನೆಲೆ ಧರಣಿ ತಾತ್ಕಾಲಿಕ ಮುಂದೂಡಿಕೆ: ಕುರುಬೂರು ಶಾಂತಕುಮಾರ್... ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು ಮೈಸೂರು: ಹೆಚ್ಚುವರಿ ಹಣ 100 ರೂ. ಪಾವತಿಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ... KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ, ಸಾರಿಗೆ ಸಚಿವರಿಗೆ ಮಾರ್ಗದರ್ಶನ ನೀಡುವಂತೆ ಹೈ ಕೋರ್ಟ್‌ ಸಿಜೆಗೆ ಲಿಖಿತ ಮನವ... KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು