NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಡಿ.13ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ವೇತನ ಹೆಚ್ಚಳ ಸಂಬಂಧ ಸಭೆ- ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲು ಇದೇ ಇದೇ ಡಿಸೆಂಬರ್‌ 13ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನೌಕರರ ಸಂಘಟನೆಗಳ ಸಭೆಯನ್ನು ನಿಗಮದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ತಿಳಿಸಿದ್ದಾರೆ.

ಕಳೆದ ನ.26ರಂದು ಸಿಎಂ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ವಿಧಾನಸೌಧದಲ್ಲಿ ಕರೆಯಲಾಗಿತ್ತು. ಆದರೆ ಅಂದು ನಡೆದ ಸಭೆಗಳು ವಿಫಲವಾಗಿದ್ದವು. ಹೀಗಾಗಿ ಮತ್ತೆ ಡಿ.13ರಂದು ಸಭೆ ಕರೆಯಲಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ನಿರ್ದೇಶನದಂತೆ ನಿಗದಿಪಡಿಸಿರುವ ಸಭೆಗೆ ಎಲ್ಲ ಸಂಘಟನೆಗಳ ತಲಾ ಇಬ್ಬರು ಪದಾಧಿಕಾರಿಗಳು ಹಾಜರಾಗಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಸಭೆ ಅಂದು ಬೆಳಗ್ಗೆ 11ಗಂಟೆಗೆ ನೌಕರರ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಸ್ತೆ ಸಾರಿಗೆ ಮಜೂರ್ ಸಂಘ ಒಕ್ಕೂಟ ಹಾಗೂ ಕೆಎಸ್‌ಅರ್‌ಟಿಸಿ & ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇನ್ನು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಸಭೆ ಡಿ.13ರ ಮಧ್ಯಾಹ್ನ ಕರೆಯಲಾಗಿದ್ದು ಸ್ಥಳಾವಕಾಶದ ಲಭ್ಯತೆಯ ದೃಷ್ಟಿಯಿಂದ ಪ್ರತಿ ಕಾರ್ಮಿಕ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಮಾತ್ರ ಹಾಜರಾಗಲು ತಿಳಿಸಿದ್ದಾರೆ.

ಸಿಎಂ ಜತೆ ನಡೆದ್ದು ನಾಲ್ಕು ಸಭೆಗಳು: ಆಗಸ್ಟ್‌ 4ರಂದು ಹೈ ವೋಲ್ಟೆಜ್‌ ಸಭೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಇದೇ ರೀತಿ ಬೇಡಿಕೆಗಳ ಕುರಿತು ಜುಲೈ 4ರಂದು ಸಂಜೆ ಮತ್ತೆ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದಿತ್ತು. ಈ ಸಭೆಗಳು ಸೇರಿದಂತೆ ಒಟ್ಟು ಸಿಎಂ ಅಧ್ಯಕ್ಷತೆಯಲ್ಲಿ 4 ಸಭೆಗಳು ನಡೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೆ ನ.26ರಂದು ನಡೆದ 5ನೇ ಸಭೆಯಲ್ಲಾದರೂ ನೌಕರರಿಗೆ ಸಿಹಿ ಸುದ್ದಿ ಸಿಗಲಿದೆ ಎಂಬ ವಿಶ್ವಾಸದಲ್ಲಿ ಸಂಘಟನೆಗಳು ಇದ್ದವು ಆದರೆ ಅಂದಿನ ಸಭೆಕೂಡ ವಿಫಲವಾಯಿತು.

ಹೀಗಾಗಿ ಮತ್ತೆ ಡಿ.13ರಂದು ಸಾರಿಗೆ ಸಚಿವ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಾದರೂ ಸಾರಿಗೆ ನೌಕರರ ವೇತನಕ್ಕೆ ಸಂಬಂಧಪಟ್ಟಂತೆ ಅಂತಿಮಾ ತೀರ್ಮಾನ ತೆಗೆದುಕೊಳ್ಳಬೇಕಿದ್ದು ಮತ್ತೆ ಅದೇ ವಿಶ್ವಾಸದಲ್ಲಿ ಸಂಘಟನೆಗಳ ಎಲ್ಲ ಪದಾಧಿಕಾರಿಗಳು ಆಶಾಭಾವನೆ ಹೊಂದಿದ್ದಾರೆ.

ಇನ್ನು ಚುನಾವಣೆ ಸಂದರ್ಭದಲ್ಲಿ ತಾವೇ ನೌಕರರಿಗೆ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿ ಮಾಡಿ ಎಂಬ ಬೇಡಿಕೆಗಳನ್ನು ನೌಕರರ ಒಕ್ಕೂಟದ ಮುಖಂಡರು ಸಿಎಂ ಮುಂದಿಡಲಿದ್ದಾರೆ. ಹೀಗಾಗಿ ಸಾರಿಗೆ ಸಚಿವರು ತಮ್ಮದೇ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಜಾರಿಮಾಡಲು ಸಿಎಂ ಒಪ್ಪಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಖಚಿತ ಪಡಿಸಬೇಕಿದೆ.

ನೌಕರರ ಪ್ರಮುಖ ಬೇಡಿಕೆಗಳೇನು?: ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳ ಆಗಬೇಕಿರುವ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿದೆ.

ಈ ಸಂಬಂಧ ಈ ಹಿಂದೆಯೇ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟವೂ ನೌಕರರ ವೇತನ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆ  ಈಡೇರಿಕೆ ಬಗ್ಗೆ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳು ಸೇರಿದಂತೆ ಪ್ರಮುಖರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ.

ಕಳೆದ 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಇನ್ನು ನೌಕರರಿಗೆ ಸಿಕ್ಕಿಲ್ಲ. ಜತೆಗೆ ಈಗಾಗಲೇ 2024ರ ಜನವರಿ 1ರಿಂದ ಆಗಬೇಕಿರುವ ವೇತನ  ಹೆಚ್ಚಳದ ಅವಧಿ ಮುಗಿದು 23 ತಿಂಗಳು ಕಳೆದರೂ ಆ ಬಗ್ಗೆಯೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

Megha
the authorMegha

Leave a Reply

error: Content is protected !!