NEWS

ಬೀದರ್‌: ಸಾರಿಗೆ ನೌಕರರಿಗೆ ಅವಾಚ್ಯವಾಗಿ ಬೈದಿರುವ ಕಿಡಿಗೇಡಿಯ ಬಂಧಿಸಿ- ಪೊಲೀಸರಿಗೆ ದೂರು ಕೊಟ್ಟ ಕೂಟದ ಪದಾಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೀದರ್‌: ಸಾಮಾಜಿಕ ಜಾಲತಾಣದಲ್ಲಿ ಕೆ.ಎಸ್.ಆರ್.ಟಿ.ಸಿಯ ಚಾಲಕರಿಗೆ ಮನಬಂದಂತೆ ಅವಾಚ್ಯ ಶಬ್ದದಿಂದ ಬೈದಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೂತನ ನಗರ ಪೊಲೀಸ್‌ ಠಾಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ದೂರು ನೀಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ (04-12-2025) ಮಧ್ಯಾಹ್ನ ಸಾಮಾಜಿಕ ಜಾಲತಾಣವಾದ instagram ID: Mr_smile_009 ರಿಂದ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಚಾಲಕ, ನಿರ್ವಾಹಕರಿಗೆ ಹೆಂಡತಿ, ತಾಯಿ, ತಂಗಿಯನ್ನುವುದನ್ನೇ ಮರೆತು ಅವಾಚ್ಯ ಶಬ್ದದಿಂದ ಬೈಯ್ದಿರುವ ವಿಡಿಯೋ ಹರಿದಾಡುತಿದೆ.

ಹಗಲಿರುಳೆನ್ನದೇ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ನಿಗಮದ ನೌಕರರಿಗೆ ಇದನ್ನು ನೋಡಿ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಅಲ್ಲದೆ ಸಾರ್ವಜನಿಕರಲ್ಲಿ ನಿಗಮದ ನೌಕರರ ಮರ್ಯಾದೆ ಕಳೆದಿದ್ದಾನೆ.

ನಿಗಮದ ನೌಕರರ ಗೌರವಕ್ಕೆ ಧಕ್ಕೆ ತರುವಂತ ಈ ವಿಡಿಯೋ ಮಾಡಿ ಸರಕಾರದ ಅಂಗ ಸಂಸ್ಥೆಯಾದ ಕೆ.ಎಸ್.ಆರ್.ಟಿ.ಸಿಯ ಗೌರವಕ್ಕೂ ಧಕ್ಕೆ ಉಂಟು ಮಾಡಿರುವ ಈ ವ್ಯಕ್ತಿಯೂ ಸಮವಸ್ತ್ರವಿಲ್ಲದೇ ಆಟೋ ಚಾಲನೆ ಮಾಡುತ್ತಾ ರಸ್ತೆ ನಿಯಮವನ್ನು ಉಲ್ಲಂಘನೆ ಮಾಡಿ ನೌಕರರ ಬಗ್ಗೆ ಕೆಟ್ಟದಾಗಿ ಬೈಯಿರುವುದು ಸ್ಪಷ್ಟವಾಗಿ ಕೇಳಿಸುತ್ತದೆ.

ಆದುದ್ದರಿಂದ, ತಾವು ಈ ವಿಷಯವನ್ನು ಅತಿ ಗಂಭೀರವಾಗಿ ಪರಿಗಣಿಸಿ instagram ID: Mr_smile_009 ಸಂಬಂಧ ಪಟ್ಟ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಸಾರಿಗೆ ನೌಕರರ ಕೂಟದ ವತಿಯಿಂದ ದೂರು ಸದಲ್ಲಿಸುತ್ತಿದ್ದೇವೆ.

ಒಂದು ವೇಳೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟದ ಹಾದಿ ಹಿಡಿಯಲಾಗುವುದೆಂದು ಈ ಮೂಲಕ ಸಾರಿಗೆ ನೌಕರರ ಕೂಟ ಆಗ್ರಹಿಸಿದೆ.

ದೂರು ಸಲ್ಲಿಸುವ ವೇಳೆ ಕೂಟದ ಬೀದರ್‌ ವಿಭಾಗದ ಅಧ್ಯಕ್ಷ ಬಸವರಾಜ ಚಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾಗಶೆಟ್ಟಿ ಸೇರಿದಂತೆ ಪದಾಧಿಕಾರಿಗಳು ಇದ್ದರು.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ