NEWSದೇಶ-ವಿದೇಶರಾಜಕೀಯ

ಮತ್ತೆ ಆಗಸ್ಟ್‌ ಅಂತ್ಯದವರೆಗೂ ತಮಿಳುನಾಡು ಲಾಕ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಆಗಸ್ಟ್‌ ಕೊನೆಯವರೆಗೂ ಲಾಕ್‌ಡೌನ್‌ ಮುಂದುವರಿಸುವುದಾಗಿ  ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಯಂತ್ರಣ ಮೀರುತ್ತಿರುವುದರಿಂದ  ಸರ್ಕಾರ ಆ.31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ್ದು, ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಅಬಿಪ್ರಾಯಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯದಿಂದ ಹೊರಗೆ ಪ್ರಯಾಣ ಮಾಡುವವರು ಮತ್ತು ಒಳಬರುವವರು ಇ-ಪಾಸ್‌ ಪಡೆಯುವುದು ಕಡ್ಡಾಯ. ಅಂತರಜಿಲ್ಲಾ ಪ್ರಯಾಣಕ್ಕೆ ಕೂಡ ಇದು ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಈವರೆಗೆ ಲಾಕ್‌ಡೌನ್ ಜಾರಿಯಿರುವ ಪ್ರದೇಶಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಸಂಪೂರ್ಣ ಲಾಕ್‌ಡೌನ್‌ ಇರಲಿದ್ದು, ಭಾನುವಾರಗಳಂದು ಕೂಡ ವಿನಾಯ್ತಿ ಇರುವುದಿಲ್ಲ. ಇತರ ಜಿಲ್ಲೆಗಳಲ್ಲಿ ಸದ್ಯ ಇರುವ ನಿರ್ಬಂಧಗಳೇ ಮುಂದುವರಿಲಿದೆ . ಜತೆಗೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ರಾಜ್ಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ