NEWSದೇಶ-ವಿದೇಶರಾಜಕೀಯ

ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ  

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಜಮ್ಮು ಮತ್ತು ಕಾಶ್ಮೀರದ  ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ಅವರ ರಾಜೀನಾಮೆಯಿಂದ ತೆರವಾಗಿದ್ದ  ಸ್ಥಾನಕ್ಕೆ ಕೇಂದ್ರ ಮಾಜಿ ಸಚಿವ ಮನೋಜ್ ಸಿನ್ಹಾ ಅವರನ್ನು ನೂತನ ಲೆಫ್ಟಿನೆಂಟ್  ಗವರ್ನರ್ ಆಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇಮಕ ಮಾಡಿದ್ದಾರೆ.

ಜಿ.ಸಿ. ಮುರ್ಮು  ಅವರು ಬುಧವಾರ  ರಾಷ್ಟ್ರಪತಿ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಇದರಿಂದ ತೆರವಾಗಿದ್ದ ಆ ಸ್ಥಾನಕ್ಕೆ  ಮನೋಜ್ ಸಿನ್ಹಾ ಅವರನ್ನು ರಾಷ್ಟ್ರಪತಿ  ಗುರುವಾರ ನೇಮಕ ಮಾಡಿದ್ದಾರೆ.

ಸಿನ್ಹಾ ಅವರು ಲೆಫ್ಟಿನೆಂಟ್  ಗವರ್ನರ್ ಆಗಿ ನೇಮಕವಾಗಿದ್ದು ಜಮ್ಮು-ಕಾಶ್ಮೀರದ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಈ ಮೂಲಕ  ಕೇಂದ್ರಾಡಳಿತದ ಜನರನ್ನು ತಲುಪುವ ಗುರಿ ಹೊಂದಿದೆ. ಇನ್ನು ಮುರ್ಮು ಅವರ  ಒಂಬತ್ತು ತಿಂಗಳ ಅಧಿಕಾರಾವಧಿಯಲ್ಲಿ ನಾವು ಅಂದುಕೊಂಡ ಮಟ್ಟಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿಲ್ಲ ಎಂದು ಹೇಳಿದ್ದಾರೆ.

ಸಿನ್ಹಾ ಲೋಕಸಭೆಯಲ್ಲಿ ಮೂರು ಬಾರಿ ಪೂರ್ವ ಉತ್ತರ ಪ್ರದೇಶದ ಘಾಜಿಪುರದ  ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಅವರು ಸಂವಹನ ಮತ್ತು ರೈಲ್ವೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

2017 ರಲ್ಲಿ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ದಿಂದ ಟಿಕೆಟ್‌ಪಡೆದ ಗೆದ್ದ ನಂತರ, ಅವರು ಉತ್ತರಪ್ರದೇಶದ  ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಕೊನೆ ಘಳಿಗೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾದರು. ಸಿನ್ಹಾ ಗೋರಖ್‌ಪುರ ಎಂಪಿ ಕ್ಷೇತ್ರದಿಂದ  ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಅವರು 1999 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ಸಿನ್ಹಾ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿದ್ದರು. ಹೀಗಾಗಿ ವಿದ್ಯಾರ್ಥಿ  ದಿಸೆಯಲ್ಲೇ  ಅವರು ರಾಜಕೀಯ ಪ್ರವೇಶ ಮಾಡಿದ್ದಾರೆ.

ರೈಲ್ವೆ ರಾಜ್ಯ ಸಚಿವರಾಗಿ, ಪೂರ್ವ ಉತ್ತರ ಪ್ರದೇಶದ ಹಲವಾರು ನಗರಗಳನ್ನು ಸಂಪರ್ಕಿಸುವ ರೈಲು ಯೋಜನೆಗಳನ್ನು ಕೈಗೆತ್ತಿಕೊಂಡು ಅದನ್ನು ಪೂರ್ಣಗೊಳಿಸಿ  ಆ ಮೂಲಕ  ಸಿನ್ಹಾ ಅವರು ಒಳ್ಳೆ ಹೆಸರನ್ನು ಗಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್