NEWSಆರೋಗ್ಯನಮ್ಮರಾಜ್ಯ

ಕೊರೊನಾಗೆ ಬಿಎಂಟಿಸಿ ನೌಕರ ಬಲಿ: ಬಿಲ್‌ ಕಟ್ಟಲಾಗದೆ ಮಗುವಿನೊಂದಿಗೆ ಪತ್ನಿ ಪರದಾಟ

ಮೂಲತಃ ಮೈಸೂರು ಜಿಲ್ಲೆ ಕೆ.ಆರ್.‌ ನಗರ ತಾಲೂಕಿನ ನಿವಾಸಿ ಪ್ರಶಾಂತ್‌ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್‌ ಕಂ ಡ್ರೈವರ್‌ ಮೃತಪಟ್ಟಿದ್ದು, ಆಸ್ಪತ್ರೆ ಬಿಲ್‌ ಪಾವತಿಸಲಾಗದೆ ಆತನ ಪತ್ನಿ ಮತ್ತು ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿದ್ದ ಘಟನೆ ನಗರದಲ್ಲಿ ಜರುಗಿದೆ.

ಮೈಸೂರು ಜಿಲ್ಲೆಯ ಕೆ.ಆರ್.‌ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ನಿರ್ವಾಹಕ ಸದ್ಯ ಪೀಣ್ಯ ಡಿಪೋ 22ರಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಪ್ರಶಾಂತ್‌ ಮೃತರು.  ಇವರಿಗೆ 10 ದಿನಗಳ ಹಿಂದೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಚಿಕ್ಕಬಾಣವಾರದ ಎನ್‌ಆರ್‌ಆರ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಮೊದಲೇ ಕುಟುಂಬಕ್ಕೆ ಆಸರೆಯಾಗಿದ್ದ ಪತಿಯನ್ನು ಕಳೆದುಕೊಂಡ ನೋವಿನಲ್ಲಿರುವ ಪತ್ನಿಗೆ ಆಸ್ಪತ್ರೆ ಆಡಳಿತ ಮಂಡಳಿ 1.8 ಲಕ್ಷ ರೂಪಾಯಿ ಪಾವತಿಸಿ ಮೃತದೇಹ ತೆಗೆದುಕೊಂಡು ಹೋಗಿ ಎಂದು ಹೇಳಿದೆ. ಆದರೆ ಕೈಯಲ್ಲಿ ಬಿಡುಗಾಸು ಇಲ್ಲದೇ ಮೃತನ ಪತ್ನಿ ತನ್ನ ಮಗುವಿನೊಂದಿಗೆ ಆಸ್ಪತ್ರೆ ಎದುರು ಪರದಾಡುತ್ತಿದ್ದರು.

ಒಬ್ಬ ಸರ್ಕಾರಿ ನೌಕರಿಯಲ್ಲಿರುವವರಿಗೆ ಸರ್ಕಾರ ಆರೋಗ್ಯ ಸಂಬಂಧ ವಿಮೆ ಮೊತ್ತ ಕೊಡದೆ ಈ ರೀತಿ ನಡು ನೀರಿನಲ್ಲಿ ನಿಲ್ಲಿಸಿ ನೋಡುತ್ತಿರುವುದು  ಇಂದಿನ ಸರ್ಕಾರದ ವ್ಯವಸ್ಥೆಯನ್ನು ಅಣಕಿಸುವಂತಿದೆ.

ಸಿಎಂ, ಸಚಿವರು, ಮಾಜಿ ಸಿಎಂಗಳಿಗೆ ಉಚಿತ ಚಿಕಿತ್ಸೆ: ಮುಖ್ಯಮಂತ್ರಿಗಳು ಸಚಿವರು ಮತ್ತು ಮಾಜಿ ಸಿಎಂ, ಮಾಜಿ ಸಚಿವರು ಒಂದು ವೇಳೆ ಅನಾರೋಗ್ಯಕ್ಕೆ ತುತ್ತಾದರೆ ಅವರು ಕೇಳಿದ ಆಸ್ಪತ್ರೆಗಳಲ್ಲಿ ಉತ್ತಮ ಹಾಸಿಗೆಯೊಂದಿಗೆ ಎಲ್ಲಾ ಸೌಲಭ್ಯ ನೀಡಿ ಚಿಕಿತ್ಸೆ ಪಡೆಯುತ್ತಾರೆ. ಅದೇ ಒಬ್ಬ ಸರ್ಕಾರಿ ನೌಕರ ಅದು ಕರ್ತವ್ಯದಲ್ಲಿದ್ದು ಅನಾರೋಗ್ಯಕ್ಕೀಡಾದರೆ ಯಾವುದೋ ಒಂದು ಆಸ್ಪತ್ರೆಯಲ್ಲಿ ಅದೂ ಸೌಲಭ್ಯವಿಲ್ಲದೆ ಚಿಕಿತ್ಸೆ ಪಡೆಯಬೇಕು.

ಇದು ಹಿಂದಿನ ಹಾಗೂ ಇಂದಿನ ಸರ್ಕಾರಗಳನ್ನು ನಡೆಸುತ್ತಿರುವವರು ಪಾಲಿಸಿ ಕೊಂಡು ಬಂದಿರುವ ನಿಯಮ, ಸರ್ಕಾರದ ಕಾಯ್ದೆಯಲ್ಲಿ ರೂಪಿಸಿರುವಂತೆ ಇದುವರೆಗೂ ಯಾವೊಬ್ಬ ಸಿ ಮತ್ತು ಡಿ ದರ್ಜೆ ನೌಕರರಿಗೂ ಸೂಕ್ತ ಚಿಕಿತ್ಸೆ ಸಿಗದಿರುವುದು ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನೇ ಅಣಕಿಸುವಂತಿದೆ.

ಇನ್ನಾದರು ಇಂಥ ನೌಕರರಿಗೆ ಸಿಗಬೇಕಾದ ಕಾನೂನಿನಾತ್ಮಕ ಸೌಲಭ್ಯಗಳನ್ನು ಸರ್ಕಾರ ನೀಡಿ ಅವರ ಆರೋಗ್ಯವನ್ನು ಕಾಪಾಡಬೇಕು ಎಂಬುವುದು ನೊಂದ ನೌಕರರ ಮನವಿ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ