NEWSVideosನಮ್ಮರಾಜ್ಯ

ಸಾರಿಗೆ ನೌಕರರಿಗಾಗಿ ಒಗ್ಗಟ್ಟಾಗಬೇಕು- ಅದನ್ನು ಬಿಟ್ಟು ನೌಕರರ ದಾರಿ ತಪ್ಪಿಸಬೇಡಿ- ಕಂಡಕ್ಟರ್‌ ಜಯಂತ್‌ ಮರ್ಗಿ ಮನವಿ

ನೊಂದವರಿಗೆ ಹೆಗಲು

ಬೆಂಗಳೂರು: ಸರ್ಕಾರಿ ನೌಕರರು ವೇತನ ಹೆಚ್ಚಳ ಸಂಬಂಧ ಹೋರಾಟ ಮಾಡಿ ವರ್ಗಾವಣೆ, ಅಮಾನತು ಮತ್ತು ವಜಾ ಹಾಗೂ ಪೊಲೀಸ್‌ ಕೇಸ್‌ ಹಾಕಿಸಿಕೊಂಡಿರುವುದು ಇತಿಹಾಸದಲ್ಲೇ ಇಲ್ಲ. ಆದರೆ ಹೋರಾಟದ ಹೆಸರಿನಲ್ಲಿ ಸಾರಿಗೆ ನೌಕರರು ಈ ಎಲ್ಲ ಸಮಸ್ಯೆ ಅನುಭವಿಸಿದ್ದಾರೆ. ಇದಕ್ಕೆ ಕಾರಣರಾರು ಅನಂತ ಸುಬ್ಬರಾಯರೇ?

ಈ ರೀತಿ ಪ್ರಶ್ನೆ ಕೇಳುತ್ತಿರುವುದು ಬೇರೆ ಯಾರು ಅಲ್ಲ ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 1.15 ಲಕ್ಷ ನೌಕರರು. ಈ ಎಲ್ಲರ ಪರವಾಗಿ ಇಂದು ಕಂಡಕ್ಟರ್‌ ಜಯಂತ್‌ ಮರ್ಗಿ ಎಂಬುವರು ಒಂದು ವಿಡಿಯೋ ಮಾಡಿದ್ದು, ಆ ಮೂಲಕ ಜಂಟಿ ಸಂಘಟನೆಯ ಮುಖಂಡರಿಗೆ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

ಅದರಲ್ಲೂ ಮುಖ್ಯವಾಗಿ  ಜಂಟಿ ಕ್ರಿಯಾ ಸಮಿತಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಅನಂತ ಸುಬ್ಬರಾವ್‌ ಅವರಿಗೆ ನೇರವಾಗಿ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

ನೌಕರರು ಈವರೆಗೂ ಅನುಭವಿಸಿದ ಕಷ್ಟಸಾಕು ಇನ್ನು ಮುಂದಾದರು ಅವರಿಗೆ ಒಳ್ಳೆ ಜೀವನ ಮಾಡುವುದಕ್ಕೆ ಬೇಕಾದ ಸೌಲಭ್ಯಗಳನ್ನು ಕೊಡಿಸಿಕೊಡುವ ಮನಸ್ಸಿದ್ದರೆ ಮೊದಲು ಒಗ್ಗಟ್ಟಾಗಿ ಎಂದು ಮನವಿ ಮಾಡಿದ್ದಾರೆ.

ಅಲ್ಲದೆ ಹೋರಾಟದ ಹೆಸರಿನಲ್ಲಿ ಮುಗ್ದ ನೌಕರರ ಕೆಲಸವನ್ನು ಕಿತ್ತುಕೊಳ್ಳುವ ನಡೆಗೆ ಮುಂದಾಗದಿರಿ. ಈವರೆಗೂ ಹಲವಾರು ನೌಕರರು ಹೋರಾಟದ ಹೆಸರಿನಲ್ಲಿ ಬೀಗಿಗೆ ಬಿದ್ದಿದ್ದು ಮತ್ತೆ ಸಂಸ್ಥೆಗೆ ಬರಲ ಸಾಧ್ಯವೇ ಆಗದೆ ಅವರ ಕುಟುಂಬ ಜೀವನ ಸಾಗಿಸುವುದಕ್ಕೆ ಭಾರಿ ಕಷ್ಟಪಡುತ್ತಿದೆ.

ಹೀಗಾಗಿ ನಿಮ್ಮ ಹೋರಾಟದ ಹೆಸರಿನಲ್ಲಿ ಇಂದು ಸೇವೆಯಲ್ಲಿರುವ ನೌಕರರ ಹುರಿದುಂಬಿಸಿ ಆ ಉತ್ಸಾಹದಲ್ಲಿ ಹೋರಾಟಕ್ಕೆ ಇಳಿಯುವ ನೌಕರರು ವೃತ್ತಿ ಕಳೆದುಕೊಂಡು ಕಟುಂಬದವರಿಂದ ದೂರವಾಗಿರುವುದು ನಮ್ಮ ಎದುರಿಗಿದೆ ಮತ್ತೆ ಅಂಥ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಇನ್ನು ಹೋರಾಟ ಮಾಡುವುದು ಅನಿವಾರ್ಯವಾಗಿದ್ದು ಅದಕ್ಕೆ ಎಲ್ಲರೂ ಒಗ್ಗಟ್ಟಾಗಿ ಬನ್ನಿ ಇದರಿಂದ ಯಾವುದೇ ಒಬ್ಬ ನೌಕರನಿಗೂ ಸಮಸ್ಯೆ ಆಗಬಾರದು ಆ ರೀತಿ ಯೋಚಿಸಿ ಬನ್ನಿ ಎಂದು ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಅಭ್ಯರ್ಥಿಗಳಿಗೆ ನಿರಾಳ: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ಜು.8ರ ವರೆಗೆ ವಿಸ್ತರಣೆ! ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ 5ಮಂದಿ ಸಾವು, ನಲುಗಿದ ಜನತೆ, ಸಮುದ್ರದಂತೆ ಕಂಡುಬಂದ ರಸ್ತೆಗಳು BMTC: ಜುಲೈ 6ರಂದು ನೌಕರರ Pay fixation ಸಂಬಂಧ ಕೇಂದ್ರ ಕಚೇರಿಯಲ್ಲಿ ಸಭೆ ನಿಗದಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದ ಸಿಎಂಗೆ KPTCL ನೌಕರರಿಂದ ಸನ್ಮಾನ SIRಗೆ ತೆರಳುತ್ತಿದ್ದ VAO ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: ಗ್ರಾಮಾಡಳಿತ ಲೆಕ್ಕಾಧಿಕಾರಿ ಸ್ಥಿತಿ ಗಂಭೀರ- ಆಸ್ಪತ್ರೆ ... KSRTC: ನಾಲ್ಕೂ ನಿಗಮಗಳ ಬಸ್‌ ಕಿಟಕಿಗಳಿಗೆ ರಾಡ್‌ ಅಳವಡಿಸಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಮೋಹನ್ ಕುಮಾರ್ ದಾನಪ... BMTC: ಕೆ.ಆರ್.ಸರ್ಕಲ್ ಬಳಿ ಹಿಂದಿನಿಂದ ವಜ್ರ ಬಸ್‌ಗೆ ಡಿಕ್ಕಿ ಹೊಡೆದ ಎಲೆಕ್ಟ್ರಿಕ್‌ ಬಸ್‌: 14ಕ್ಕೂ ಹೆಚ್ಚು ಮಂದಿಗೆ ಗ... ಬೆಂಗಳೂರು: ಕ್ಷಣಾರ್ಧದಲ್ಲಿ ಹೊತ್ತಿಉರಿದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌: ಅದೃಷ್ಟವಶಾತ್‌ ಪ್ರಯಾಣಿಕರು ಪಾರು ಗೃಹ ಜ್ಯೋತಿಗೆ ಜಾತಿ ವಿವರ ನೀಡುವುದು ಕಡ್ಡಾಯವಲ್ಲ: ಸ್ಪಷ್ಟನೆ ನೀಡಿದ ಬೆಸ್ಕಾಂ 4ಸಾರಿಗೆ ನಿಗಮಗಳ ನೌಕರರಿಗೆ ಶೇ.12.5ರಷ್ಟು ಮೂಲ ವೇತನ ಹೆಚ್ಚಳ ಜುಲೈ ವೇತನದಲ್ಲಿ ಅನುಷ್ಠಾನ: KSRTC ಎಂಡಿ ಅಧಿಕೃತ ಆದೇಶ