CrimeNEWSನಮ್ಮಜಿಲ್ಲೆನಮ್ಮರಾಜ್ಯ

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆಯಲ್ಲಿ ಮೂವರು ಮೃತ, ಹಲವು ಪೊಲೀಸರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ವೊಂದನ್ನು ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಮೊಹಮ್ಮದ್ ಪೈಗಂಬರ್  ಬಗ್ಗೆ ಪ್ರಕಟಿಸಲಾಗಿದೆ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ ಶಾಸಕರ ಮನೆಗೆ ಹಾನಿ ಮಾಡಿದ್ದರ ಸಂಬಂಧ ಈಗಗಲೇ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುಲಕೇಶಿ ನಗರದ ಶಾಸಕ ಅಖಂಡ​ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲು ತೂರಾಟ ಹಿಂಸಾಚಾರಕ್ಕೆ ತಿರುಗಿದ್ದು. ಈಗಾಗಲೇ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.  10 ಹೆಚ್ಚು ಪೊಲೀಸರೂ  ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಕಿಡಿಗೇಡಿಗಳು ಮಾಡಿತ ಕೃತ್ಯಕ್ಕೆ ರಸ್ತೆಯಲ್ಲಿ ಹಾಗೂ ಠಾಣೆ ಎದುರೇ ವಾಹನಗಳು ಹೊತ್ತಿ ಉರಿದವು. ಕೈಯಲ್ಲಿ ಕಟ್ಟಿಗೆ ಹಾಗೂ ಕಲ್ಲು ಹಿಡಿದಿದ್ದ ನೂರಾರು ದುಷ್ಕರ್ಮಿಗಳು, ಪೊಲೀಸ್ ಹಾಗೂ ಸಾರ್ವಜನಿಕರ ವಾಹನಗಳ ಕಿಟಕಿ ಗಾಜುಗಳನ್ನು ಒಡೆದರು. ಪುಲಿಕೇಶಿನಗರ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೂ ದಾಳಿ ಮಾಡಿದ್ದ ಕಿಡಿಗೇಡಿಗಳು, ವಿದ್ಯುತ್ ದೀಪ ಹಾಗೂ ಗಾಜುಗಳನ್ನು ಒಡೆದು ಹಾಕಿದರು. ಉದ್ವಿಗ್ನಗೊಂಡಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಗಲಾಟೆ ನಡೆದ ಕೆಲವೇ ನಿಮಿಷಗಳಲ್ಲಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ನಗರದ ಎಲ್ಲಾ ವಲಯಗಳ ಡಿಸಿಪಿ ಹಾಗೂ ಎಸಿಪಿಗಳನ್ನು ಕೆ.ಜಿ.ಹಳ್ಳಿ–ಡಿ.ಜೆ.ಹಳ್ಳಿಗೆ ಠಾಣೆಗೆ ಕರೆಸಿಕೊಂಡು ತುರ್ತು ಸಭೆ ನಡೆಸಿದರು. ಎರಡೂ ಠಾಣೆ ವ್ಯಾಪ್ತಿಯಲ್ಲೂ ಪುಂಡಾಟಿಕೆ ಮಾಡಿದವರನ್ನು ಪತ್ತೆ ಹಚ್ಚಿ ಬಂಧಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎರಡೂ ಧರ್ಮದವರು ಅಣ್ಣ–ತಮ್ಮಂದಿರಂತೆ. ಯಾರೋ ‌ಕಿಡಿಗೇಡಿಗಳು ಮಾಡಿರುವ ತಪ್ಪು ಇದು. ನಾವು ಜಗಳ ಮಾಡಿಕೊಳ್ಳುವುದು ಬೇಡ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಲಿ. ನಾವೆಲ್ಲರೂ ಶಾಂತಿ ಕಾಪಾಡೋಣ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನವಿ ಮಾಡಿದ್ದಾರೆ.

ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಹಿಂಸಾಚಾರ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ನನ್ನ ಫೇಸ್ ಬುಕ್ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆಂದು ಅಖಂಡ ಶ್ರೀನಿವಾಸ ಮೂರ್ತಿ ಸೋದರಳಿಯ ನವೀನ್ ಹೇಳಿದ್ದು, ಶೀಘ್ರವೇ ಪೊಲೀಸರ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇನ್ನು ಘಟನೆಯಲ್ಲಿ 80ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಈ ಸಂಬಂಧ ಡಿ ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಜಮೀರ್ ಮತ್ತು ರಿಜ್ವಾನ್ ಅರ್ಷದ್ ಪರಿಸ್ಥಿತಿಯನ್ನು ತಹಬದಿಗೆ ತರಲು ಯತ್ನಿಸಿದರು. ಇನ್ನೂ ಈ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಅಲ್ಲದೇ ಇಂದು ಈ ಠಾಣಾ ವ್ಯಪ್ತಿಯಲ್ಲಿ ಅನಾವಶ್ಯಕವಾಗಿ ಒಡಾಡುತ್ತಿರುವವರ ಮೇಲೆ ಪೊಲೀಸರು ಮುಲಾಜಿಲ್ಲದೇ ಲಾಠಿ ಋುಚಿ ತೋರಿಸುತ್ತಿದ್ದು, ಯಾರು ಇತ್ತ ಸುಳಿಯಬಾರದು ಎಂದು ಎಚ್ಚರಿಕೆ ನೀಡುತ್ತಿದ್ದಾರೆ.

ಅಲ್ಲದೇ ಇಂಥ ಘಟನೆ ಮರುಕಳುಹಿಸಬಾರದು ಎಂಬ ಕಾರಣಕ್ಕೆ ನಗರ ಪೊಲೀಸ್‌ ಆಯುಕ್ತ ಕಮಲ್‌ಪಂಥ್‌ ಮತ್ತು ಗೃಹ ಸಚಿವರು ಹಿರಿಯ ಮತ್ತು ಕಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸಂಪೂರ್ಣ ಸ್ವತಂತ್ರ ನೀಡಿದ್ದಾರೆ. ಇದರಿಂದ ಮುಂಜಾನೆ 3 ಗಂಟೆಯವರೆಗೂ ನಡೆದ ಗಲಭೆ ಈಗ ಶಾಂತರೂಪ ತಳೆದಿದೆ.

ಇನ್ನು ಘಟನೆಯಲ್ಲಿ ಬಲಿಯಾದ ಇಬ್ಬರ ಮೃತದೇಹವನ್ನು ಬೌರಿಂಗ್‌ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ