NEWSನಮ್ಮಜಿಲ್ಲೆಬೆಂಗಳೂರು

ನಾಳೆ ಫೋನ್-ಇನ್ ಕಾರ್ಯಕ್ರಮ ನಾಗರಿಕರು ಸಮಸ್ಯೆ ತಿಳಿಸಿ: ರಾಜೇಂದ್ರ ಚೋಳನ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಳೆ ಅಂದರೆ ಜನವರಿ 5ರ ಸೋಮವಾರ ಸಂಜೆ 6 ರಿಂದ 7 ಗಂಟೆಯವರೆಗೆ ನಾಗರಿಕರು ದೂರವಾಣಿ ಮೂಲಕ ಕರೆ ಮಾಡಿ ಆಯುಕ್ತರಿಗೆ ನೇರವಾಗಿ ಅಹಲವಾಲು ಸಲ್ಲಿಸಬಹುದು.

ಕರೆ ಮಾಡಬೇಕಾದ ಸ್ಥಿರ ದೂರವಾಣಿ ಸಂಖ್ಯೆ: 080-22975803 ಆಗಿದೆ. ಜಿಬಿಎ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ಅವರು ಈ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಈ ಮೂಲಕ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತಂತೆ ದೂರವಾಣಿ ಮೂಲಕ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಅಹವಾಲು ಸಲ್ಲಿಸಬೇಕಾದ ವಿಷಯಗಳು: * ರಸ್ತೆ ಗುಂಡಿಗಳು ಮತ್ತು ರಸ್ತೆ ದುರಸ್ಥಿ ಕಾರ್ಯಗಳು * ಬೀದಿ ದೀಪಗಳ ನಿರ್ವಹಣೆ * ಕಸ ವಿಲೇವಾರಿ * ಒಣಗಿದ / ಅಪಾಯಕಾರಿ ಮರ/ಕೊಂಬೆಗಳ ಕತ್ತರಿಸುವಿಕೆ * ಉದ್ಯಾನವನಗಳ ನಿರ್ವಹಣೆ

* ಇ-ಖಾತಾ ಸಂಬಂಧಿತ ವಿಷಯಗಳು * ಅನಧಿಕೃತ ಬ್ಯಾನರ್/ಪೋಸ್ಟರ್ ಗಳ ತೆರವು * ಪಾದಚಾರಿ ಮಾರ್ಗದ ನಿರ್ವಹಣೆ ಮತ್ತು ಒತ್ತುವರಿ ತೆರವು * ಚರಂಡಿ ಶುದ್ಧೀಕರಣ * ನಗರಪಾಲಿಕೆಯಿಂದ ಇನ್ನಿತರೆ ಮೂಲಭೂತ ಸೌಕರ್ಯ ಕಲ್ಪಿಸುವ ಅಹವಾಲುಗಳು.

ನಾಳೆ ದೂರವಾಣಿ ಮೂಲಕ ಕರೆ ಮಾಡಿ ನೇರವಾಗಿ ಆಯುಕ್ತ ರಾಜೇಂದ್ರ ಚೋಳನ್ ಅವರೊಂದಿಗೆ ಮಾತನಾಡಿ ನಾಗರಿಕರು ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ನಾಗರಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಮಾನ್ಯ ಆಯುಕ್ತರು ಖುದ್ದಾಗಿ ಆಲಿಸಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನಿರ್ದೇಶನ ನೀಡಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ