NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಅತ್ಯಾಧುನಿಕ ಸ್ಮಾರ್ಟ್ ಬಸ್‌ ನಿಲ್ದಾಣದಿಂದ ಮಹಿಳೆಯರ ಸುರಕ್ಷತೆ ಹೆಚ್ಚು- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಸ್ಮಾರ್ಟ್ ನಿಲ್ದಾಣವು ಇತರ ಬಸ್ ನಿಲ್ದಾಣಗಳಿಗಿಂತ ವಿಭಿನ್ನವಾಗಿದ್ದು ಸಾರ್ವಜನಿಕರು, ಪ್ರತ್ಯೇಕವಾಗಿ ಮಹಿಳೆಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಿದೆ. ಇಲ್ಲಿರುವ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮರಾಗಳು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಇಂತಹ ಯೋಜನೆಗಳು ಇನ್ನೂ ವಿಸ್ತರಣೆಯಾಗಲಿ” ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಕೆ.ಆರ್. ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಸ್ಮಾರ್ಟ್ ಬಸ್ ನಿಲ್ದಾಣವನ್ನು ಇಂದು ಉದ್ಘಾಟಿಸಿ ಮಾತನಾಡಿದರು.

“ಸೇಪಿಯನ್ಸ್ ಹಾಗೂ ಶಿಲ್ಪಾ ಫೌಂಡೇಶನ್ ನೇತೃತ್ವದಲ್ಲಿ ನಿರ್ಮಿಸಲಾಗಿರುವ ಈ ಸ್ಮಾರ್ಟ್ ನಿಲ್ದಾಣವು ಹಲವು ವೈಶಿಷ್ಟತೆಗಳಿಂದ ಕೂಡಿದ್ದು ಇದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಇದರಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಕೆ ಮಾಡಿದಲ್ಲಿ ಯೋಜನೆಯು ಯಶಸ್ವಿಯಾಗಲಿದೆ ಎಂದರು.

ಶಿಲ್ಪಾ ಫೌಂಡೇಶನ್ ಸೇಪಿಯನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಗರದ ಸಾರಿಗೆ ವ್ಯವಸ್ಥೆಯಲ್ಲಿ ಪರಿವರ್ತನೆಯನ್ನು ತರಲು ಹಾಗೂ ಸಾರ್ವಜನಿಕರಿಗೆ ಅನುಕೂಲಕರ ಮತ್ತು ಹೊಸ ಅನುಭವವನ್ನು ನೀಡುವ ನಿಟ್ಟಿನಲ್ಲಿ ಬ್ರಾಂಡ್ ಬೆಂಗಳೂರು ಅಡಿಯಲ್ಲಿ ನಗರದ ಪ್ರಮುಖ 3 ಪ್ರದೇಶಗಳಲ್ಲಿ ಸುಸಜ್ಜಿತ ಮತ್ತು ಅತ್ಯಾಧುನಿಕವಾದ ಸ್ಮಾರ್ಟ್ ಬಸ್ಸು ನಿಲ್ದಾಣಗಳನ್ನು ರೂಪಿಸಿದೆ. ಈ ಯೋಜನೆಯು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತ ಹಾಗೂ ಪ್ರಯಾಣಿಕ ಸ್ನೇಹಿ ಬಸ್ ನಿಲ್ದಾಣವಾಗಲಿದೆ ಎಂದರು.

ಸ್ಮಾರ್ಟ್ ನಿಲ್ದಾಣದ ವೈಶಿಷ್ಟ್ಯಗಳು: ನಗರದಲ್ಲಿ ಅನಿಯಮಿತ ಬಸ್ ನಿಲ್ದಾಣಗಳಿದ್ದರೂ ಪ್ರಯಾಣಿಕ ಸ್ನೇಹಿ ಹಾಗೂ ಅತ್ಯಾಧುನಿಕ ಶೈಲಿಯ ಗುಣಮಟ್ಟದ ನಿಲ್ದಾಣವನ್ನು ಕಲ್ಪಿಸುವುದು ಸ್ಮಾರ್ಟ್ ನಿಲ್ದಾಣದ ಉದ್ದೇಶವಾಗಿದೆ. ಅದಕ್ಕಾಗಿಯೇ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಅತಿ ಉಪಯುಕ್ತವಾಗುವ ರೀತಿಯಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ.

• ಸಿಸಿಟಿವಿ ಕ್ಯಾಮರಾ: ಸ್ಮಾರ್ಟ್ ಬಸ್ ನಿಲ್ದಾಣದಲ್ಲಿ 24/7 ಸಿಸಿ ಕ್ಯಾಮರಾಗಳು ಕಾರ್ಯಾಚರಿಸಲಿವೆ. ಹಾಗಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುತ್ತದೆ. ಸಿಸಿ ಕ್ಯಾಮರಾಗಳು ಸ್ಥಳೀಯ ಪೊಲೀಸ್ ಠಾಣೆಗೆ ಸಂಪರ್ಕ ಹೊಂದಿರಲಿದ್ದು ಸ್ಥಳೀಯ ಠಾಣಾ ಪೊಲೀಸರ ನಿರೀಕ್ಷಣೆಯಲ್ಲಿರಲಿದೆ.

• ಪ್ಯಾನಿಕ್ ಬಟನ್: ಬಸ್ ನಿಲ್ದಾಣದಲ್ಲಿ ಪ್ರಮುಖವಾಗಿ ಪ್ಯಾನಿಕ್ ಬಟನ್ ಅಳವಡಿಸಲಾಗಿದೆ. ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಥವಾ ಸಾರ್ವಜನಿಕರಿಗೆ ಮುಖ್ಯವಾಗಿ ಮಹಿಳೆಯರಿಗೆ ಯಾವುದೇ ರೀತಿಯ ಅಪಾಯ ಉಂಟಾಗುವ ಸನ್ನಿವೇಶದಲ್ಲಿ ಪ್ಯಾನಿಕ್ ಬಟನ್ ಒತ್ತಿದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಸಂದೇಶ ತಲುಪಲಿದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಅಪಾಯಕ್ಕೊಳಗಾದವರ ರಕ್ಷಣೆ ಮಾಡಲಿದ್ದಾರೆ.

• ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮೆಷಿನ್: ಸ್ಮಾರ್ಟ್ ಬಸ್ಸು ನಿಲ್ದಾಣದಲ್ಲಿ ಯಾವುದೇ ಸಂಧರ್ಭದಲ್ಲಿ ಮಹಿಳೆಯರಿಗೆ 24/7 ಸ್ಯಾನಿಟರಿ ಪ್ಯಾಡ್ ಗಳು ದೊರೆಯಲಿವೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪ್ಯಾಡ್ ಗಳನ್ನು ಸ್ವೀಕರಿಸಿಕೊಳ್ಳಬಹುದು.

• ಚಾರ್ಜಿಂಗ್ ಪಾಯಿಂಟ್ಸ್: ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಥವಾ ಸಾರ್ವಜನಿಕರಿಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಚಾರ್ಜಿಂಗ್ ಮಾಡಲು ಚಾರ್ಜಿಂಗ್ ಪಾಯಿಂಟ್ ಗಳು ಇರಲಿವೆ. ದಿನದ 24 ಗಂಟೆಗಳೂ ಇವೆ ಕಾರ್ಯರೂಪದಲ್ಲಿರುತ್ತವೆ.

• IOT ಬೇಸ್ಡ್ ಗಾರ್ಬೇಜ್ ಬಿನ್: ಬಸ್ಸು ನಿಲ್ದಾಣದಲ್ಲಿ ಸೆನ್ಸರ್ ಬೇಸ್ಡ್ ಡಸ್ಟ್ ಬಿನ್ ಅಳವಡಿಸಲಾಗಿದ್ದು, ಒಣ ತ್ಯಾಜ್ಯ ಹಾಗೂ ಹಸಿ ತ್ಯಾಜ್ಯಗಳನ್ನು ವಿಂಗಡಿಸಿ ತ್ಯಾಜ್ಯ ಶೇಖರಿಸಲಿದ್ದು ತ್ಯಾಜ್ಯ ತುಂಬಿದ ತಕ್ಷಣದಲ್ಲಿ ಆನ್ ಲೈನ್ ಮೂಲಕ ನಿರ್ವಾಹಕರಿಗೆ ಸೈರನ್ ಮೂಲಕ ಮಾಹಿತಿ ತಲುಪಲಿದ್ದು ಕೂಡಲೇ ತ್ಯಾಜ್ಯ ವಿಲೇವಾರಿ ಮಾಡಬಹುದಾಗಿದೆ.

• ಬಸ್ಸುಗಳ ವಿವರ: ಬಸ್ಸು ನಿಲ್ದಾಣದಲ್ಲಿ ನಾಲ್ಕು ಡಿಸ್ಪ್ಲೇಗಳನ್ನು ಅಳವಡಿಸಿದ್ದು ಒಂದರಲ್ಲಿ ಬಿ.ಎಂ.ಟಿ.ಸಿ ಬಸ್ಸುಗಳ ವಿವರ ಲಭ್ಯವಾಗಲಿದೆ.

• ರೈನ್ ಹಾರ್ವೆಸ್ಟಿಂಗ್ ಸಿಸ್ಟಮ್: ಮಳೆ ನೀರನ್ನು ಸಂಗ್ರಹಿಸಿ ನೀರು ಪೋಳಾಗದಂತೆ ನೀರನ್ನು ಗಿಡಗಳಿಗೆ ಹಾಗೂ ಇಂಗು ಗುಂಡಿಗಳಿಗೆ ಬಿಡಲಾಗುತ್ತದೆ.

• ಸ್ನ್ಯಾಕ್ ವೆಂಡಿಂಗ್ ಮೆಷಿನ್: ಬಸ್ಸು ನಿಲ್ದಾಣದಲ್ಲಿ ಸ್ನ್ಯಾಕ್ ವೆಂಡಿಂಗ್ ಮೆಷಿನ್ ಅಳವಡಿಸಲು ಸ್ಥಳ ಮೀಸಲಿರಿಸಿದ್ದು ಸ್ನ್ಯಾಕ್ ವೆಂಡಿಂಗ್ ಮೆಷಿನ್ ಕೂಡಾ ಅಳವಡಿಸಬಹುದಾಗಿದೆ.

ಉಳಿದಂತೆ ಅತ್ಯಾಧುನಿಕ ಹಾಗೂ ಸುಸಜ್ಜಿತ ಬಸ್ಸು ನಿಲ್ದಾಣವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಿದ್ದು ಯಾವುದೇ ರೀತಿಯ ಜಾಹೀರಾತುಗಳನ್ನು ಅಳವಡಿಸಲಾಗುವುದಿಲ್ಲ. ಡಿಸ್ಪ್ಲೇಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವ ಬಿಬಿಎಂಪಿ ಅಥವಾ ಸರಕಾರದ ಮಾಹಿತಿಗಳನ್ನು ಬಿಬಿಎಂಪಿ ಬಿತ್ತರಿಸಬಹುದಾಗಿದೆ.

ಕಾರ್ಯಕ್ರಮದಲ್ಲಿ ಸೇಪಿಯನ್ಸ್ ಸಂಸ್ಥೆಯ ಸುರಜೀತ್ ಬಸು, ರಾಜೇಶ್ ಕೆಂಕೆರೆ, ಸುಶೀಲ್ ಮಹಲ, ಗಿರೀಶ್ ಕುಮಾರ್, ಶಿಲ್ಪಾ ಫೌಂಡೇಶನ್ ಸಂಸ್ಥಾಪಕ ಅಚ್ಚುತ್ ಗೌಡ ಮುಂತಾದವರು ಉಪಸ್ಥಿತರಿದ್ದರು

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್