NEWSದೇಶ-ವಿದೇಶಸಂಸ್ಕೃತಿ

80ರ ಮುಸ್ಸಂಜೆಯ ಹರೆಯದ ವ್ಯಕ್ತಿ ಜತೆ ಸಪ್ತಪದಿ ತುಳಿದ 23ರ ಯುವತಿ!

ವಿಜಯಪಥ ಸಮಗ್ರ ಸುದ್ದಿ

ಚೀನಾ: ಮುಸ್ಸಂಜೆಯ ಕಾಲದಲ್ಲಿ ಇರುವ 80ರ ಹರೆಯದ ವ್ಯಕ್ತಿ ಜತೆ  23 ವರ್ಷದ ಯುವತಿಯೊಬ್ಬಳು ಸಪ್ತಪದಿ ತುಳಿಯುವ ಮೂಲಕ ಆ ವೃದ್ಧರ ಕೈ ಹಿಡಿದಿದ್ದಾಳೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೌದು!  ಪ್ರೀತಿಗೂ ವಯಸ್ಸಿಗೂ ಯಾವುದೇ ಸಂಬಂಧವಿಲ್ಲ. ಕಿರಿಯರು, ಹಿರಿಯರು, ಬಣ್ಣ, ಜಾತಿ, ಮತ, ಲಿಂಗ ಈ ಯಾವುದೇ ಭೇದವೂ ಇಲ್ಲ ಎಂಬುವುದು ಅಲ್ಲಲ್ಲಿ ಸಾಬೀತಾಗುತ್ತಲೇ ಇರುತ್ತದೆ.  ಈ ಬಂಧ ಸಂಬಂಧದ ಎಷ್ಟೋ ಜೋಡಿಗಳನ್ನು ನೋಡಿ ನಾವು ಹುಬ್ಬೇರಿಸಿದ್ದೂ ಉಂಟು. ಇದೀಗ ಅಂಥದ್ದೇ ಜೋಡಿಯೊಂದು ಸಪ್ತಪದಿ ತುಳಿಯುವ ಮೂಲಕ ಸುದ್ದಿಯಲ್ಲಿದೆ.

23ರ ಯುವತಿಯೊಬ್ಬಳು ತನ್ನ ಅಜ್ಜನ ವಯಸ್ಸಿನ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾದ ಈ ಅಪರೂಪದ ಘಟನೆ ನಡೆದಿರುವುದು ಚೀನಾದಲ್ಲಿ.

ಆಡಿಟಿ ಸೆಂಟ್ರಲ್ ವೆಬ್‌ಸೈಟ್‌ನ ವರದಿಯ ಪ್ರಕಾರ ಹೆಬೈ ಪ್ರಾಂತ್ಯದ ವೃದ್ಧಾಶ್ರಮ ಒಂದರಲ್ಲಿ ಸ್ವಯಂಸೇವಕಳಾಗಿ ಕೆಲಸ ಮಾಡುತ್ತಿದ್ದ 23 ವರ್ಷದ ಯುವತಿ, 80 ವರ್ಷದ ವ್ಯಕ್ತಿಯನ್ನು ಭೇಟಿಯಾದರು. ಆರಂಭದ ಪರಿಚಯ ದಿನಗಳ ಬಳಿಕ ಸ್ನೇಹಕ್ಕೆ ತಿರುಗಿದೆ. ಇಬ್ಬರು ಒಟ್ಟಿಗೆ ಸಮಯ ಕಳೆಯಲು ಆರಂಭಿಸಿದ್ದಾರೆ. ಕ್ರಮೇಣ ಇಬ್ಬರ ಸ್ನೇಹ, ಪ್ರೀತಿಯ ಸ್ವರೂಪವನ್ನು ಪಡೆದುಕೊಂಡಿದೆ.

ವರದಿಗಳ ಪ್ರಕಾರ, ಮುದುಕನ ಪ್ರಬುದ್ಧತೆ, ಸ್ಥಿರತೆ ಮತ್ತು ಬುದ್ಧಿವಂತಿಕೆಗೆ ತಾನು ಆಕರ್ಷಿತಳಾಗಿದ್ದೇನೆ ಎಂದು ಹುಡುಗಿ ಹೇಳಿದ್ದಾಳೆ. ಅದೇ ಸಮಯದಲ್ಲಿ ಯುವತಿಯ ದಯೆ ಮತ್ತು ದೈಹಿಕ ಸೌಂದರ್ಯದಿಂದ ಪ್ರಭಾವಿತನಾಗಿದ್ದೇನೆ ಎಂದು ವೃದ್ಧ ಹೇಳಿದ್ದಾರೆ.

ಈ ಇಬ್ಬರೂ ಪರಸ್ಪರ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದು,  ಬಳಿಕ ಮದುವೆಯಾಗಲು ಬಯಸಿದ್ದಾರೆ. ಆದರೆ, ಇವರಿಬ್ಬರ ನಿರ್ಧಾರಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದರು.  ಯುವತಿ ತನ್ನ ಪ್ರೀತಿಯ ಬಗ್ಗೆ ಪಾಲಕರಿಗೆ ತಿಳಿಸಿದಾಗ, ಮುದುಕನ ಜತೆ ಮಗಳ ಮದುವೆ ಮಾಡಿಕೊಡಲು ಒಪ್ಪಲೇ ಇಲ್ಲ.

ಆದರೆ, ಯುವತಿ ತನ್ನ ಪಾಲಕರನ್ನು ಧಿಕ್ಕರಿಸಿ, ಮನೆಯಿಂದ ಹೊರಬಂದು ಇತ್ತೀಚೆಗೆ ವೃದ್ಧನನ್ನು ಮದುವೆಯಾಗಿದ್ದಾಳೆ. ಈ ಮದುವೆಗೆ ಆಕೆಯ ಸಂಬಂಧಿಕರು ಯಾರೂ ಬಂದಿರಲಿಲ್ಲ. ಮದುವೆಯ ಸಮಯದಲ್ಲಿ, ತಾವಿಬ್ಬರು ಪರಸ್ಪರ ಬೇರ್ಪಡಿಸುವುದಿಲ್ಲ ಎಂದು ಭರವಸೆಗಳನ್ನು ವಿನಿಮಯ ಮಾಡಿಕೊಂಡರು ಎಂದು ವರದಿಯಾಗಿದೆ.

ಇದೇ ಸಂದರ್ಭದಲ್ಲಿ ಈ ಮದುವೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ತಮ್ಮದೇಯಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಮದುವೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಯುವತಿಯು ಹಣಕ್ಕಾಗಿ ವೃದ್ಧನನ್ನು ಮದುವೆಯಾಗಿರಬಹುದು ಎನ್ನುತ್ತಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ