ಬಾಗಲಕೋಟೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹತ್ತುವ ವೇಳೆ ಆಯಾತಪ್ಪಿ ಬಿದ್ದು ಚಕ್ರಕ್ಕೆ ಸಿಲುಕಿ ಸಾರಿಗೆ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ನವನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೌಜಗನೂರು ಗ್ರಾಮದ ನಿವಾಸಿ ಗದ್ದೆಪ್ಪ (50) ಮೃತರು. ನವನಗರದಿಂದ ಇಳಕಲ್ ಕಡೆಗೆ ತೆರಳುತ್ತಿದ್ದ ಬಸ್ ಹತ್ತುವ ವೇಳೆ ಈ ದುರ್ಘಟನೆ ನಡೆದಿದೆ.
ಚಲಿಸುತ್ತಿದ್ದ ಬಸ್ ಹತ್ತಿದ್ದರಿಂದ ಆಯಾತಪ್ಪಿ ಕೆಳಗೆ ಬಿದ್ದಿರುವ ಗದ್ದೆಪ್ಪ ಅವರ ಮೇಲೆ ಬಸ್ ಚಕ್ರ ಹರಿದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಡೂರ ಡಿಪೋದಲ್ಲಿ ಗದ್ದೆಪ್ಪ ಕರ್ತವ್ಯ ನಿರ್ವಹಿಸುತ್ತಿದ್ದರು. ಗದ್ದೆಪ್ಪ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಅಪಘಾತ ಸ್ಥಳಕ್ಕೆ ನವನಗರ ಟ್ರಾಫಿಕ್ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು ಬಳಿಕ ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು.
![](https://vijayapatha.in/wp-content/uploads/2024/02/QR-Code-VP-1-1-300x62.png)