NEWSನಮ್ಮಜಿಲ್ಲೆಮೈಸೂರು

ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ.

ಹುಲಿ ಸೆರೆಗೆ ಎಂದು ಬೋನ್ ಇಡಲಾಗಿತ್ತು. ಆದರೆ ಆ ಬೋನಿ​​ನಲ್ಲಿ ಚಿರತೆ ಬಿದ್ದಿದೆ. ಬೋನಿನಲ್ಲಿ‌ ಇರಿಸಿದ್ದ ಹಸುವಿನ ಕರು ಭಕ್ಷಿಸಲು ಬಂದ ಚಿರತೆ ಬಂಧಿಯಾಗಿದ್ದು, ಪರಿಣಾಮ ಒಂದೇ‌ ಬೋನಿನಲ್ಲಿ‌ ಕರು‌ ಮತ್ತು ಚಿರತೆ ಚಿರತೆ ಎರಡೂ ಇದ್ದರೂ ಕರುವನ್ನು ಮಾತ್ರ ಅದು ಏನು ಮಾಡಿಲ್ಲ.

ಇನ್ನು ತಾನು ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಚಿರತೆ ಗಾಬರಿಯಾಗಿದೆ. ಭಯದಲ್ಲಿ ಹಸುವಿನ ಕರುವಿಗೆ ಯಾವುದೇ ಅಪಾಯ ಮಾಡಿಲ್ಲ. ಚಿರತೆ ಮನಸ್ಸು ಮಾಡಿದ್ದರೆ ಸುಲಭವಾಗಿ ಅದನ್ನು ತಿನ್ನಬಹುದಿತ್ತು. ಆದರೆ ಕರವನ್ನು ಮುಟ್ಟದೇ ಇರೋದನ್ನ ನೋಡಿದ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸುತ್ತಿತ್ತು. ಹೀಗಾಗಿ ಅರಣ್ಯ ಇಲಾಖೆ ಬೋನು ಇಟ್ಟಿತ್ತು. ಎಚ್.ಡಿ.ಕೋಟೆ ಪಟ್ಟಣದ ನಿವಾಸಿ ಹೆತ್ತನಾಯ್ಕರ ಜಮೀನಿನಲ್ಲಿ ಬೋನು ಇಡಲಾಗಿತ್ತು. ಕಳೆದ ರಾತ್ರಿ ಆಹಾರ ಅರಸಿ ಬಂದ ಎರಡು ವರ್ಷದ ಗಂಡು ಚಿರತೆ ಬೋನಿನಲ್ಲಿ ಸಿಕ್ಕಿಬಿದ್ದಿದ್ದು, ಹುಲಿ ಬಂದಿಲ್ಲ.

ಇನ್ನು ಅಚ್ಚರಿ ಎಂದರೆ ಹಸುವಿನ ಕರು ಇನ್ನು ಚಿಕ್ಕದಾಗಿದ್ದರಿಂದಲೋ ಏನು ಚಿರತೆ ಆ ಕರುವಿಗೆ ಏನು ಮಾಡಿಲ್ಲ. ಅಂದರೆ ಚಿರತೆ ಬೇಟೆಯಾಡುವುದಕ್ಕೂ ಇದು ಕರು ಇದನ್ನು ಬೇಟೆಯಾಡುವುದು ಸಲ್ಲ ಎಂದು ಅಂದುಕೊಂಡಿತ್ತೇನೋ? ಇಲ್ಲ ಚಿರತೆಗಳು ಚಿಕ್ಕಚಿಕ್ಕ ಕರುಗಳನ್ನು ಬೇಟೆಯಾಡುವುದಿಲ್ಲವೇನೋ ಗೊತ್ತಿಲ್ಲ. ಆದರೆ ಇದು ಪ್ರಕೃತಿಯ ಮಹಿಮೆ ಹೇಗಿದೆ ಎಂಬುದನ್ನು ಮಾತ್ರ ನಾವು ಇಲ್ಲಿ ಕಾಣುತ್ತಿದ್ದೇವೆ.

Megha
the authorMegha

Leave a Reply

error: Content is protected !!
Latest news
KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ ಎಂಎಸ್ಪಿ ಗ್ಯಾರಂಟಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲದು: ಕುರುಬೂರು SSLC ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ ಸಿಎಂ