ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ.
ಹುಲಿ ಸೆರೆಗೆ ಎಂದು ಬೋನ್ ಇಡಲಾಗಿತ್ತು. ಆದರೆ ಆ ಬೋನಿನಲ್ಲಿ ಚಿರತೆ ಬಿದ್ದಿದೆ. ಬೋನಿನಲ್ಲಿ ಇರಿಸಿದ್ದ ಹಸುವಿನ ಕರು ಭಕ್ಷಿಸಲು ಬಂದ ಚಿರತೆ ಬಂಧಿಯಾಗಿದ್ದು, ಪರಿಣಾಮ ಒಂದೇ ಬೋನಿನಲ್ಲಿ ಕರು ಮತ್ತು ಚಿರತೆ ಚಿರತೆ ಎರಡೂ ಇದ್ದರೂ ಕರುವನ್ನು ಮಾತ್ರ ಅದು ಏನು ಮಾಡಿಲ್ಲ.
ಇನ್ನು ತಾನು ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಚಿರತೆ ಗಾಬರಿಯಾಗಿದೆ. ಭಯದಲ್ಲಿ ಹಸುವಿನ ಕರುವಿಗೆ ಯಾವುದೇ ಅಪಾಯ ಮಾಡಿಲ್ಲ. ಚಿರತೆ ಮನಸ್ಸು ಮಾಡಿದ್ದರೆ ಸುಲಭವಾಗಿ ಅದನ್ನು ತಿನ್ನಬಹುದಿತ್ತು. ಆದರೆ ಕರವನ್ನು ಮುಟ್ಟದೇ ಇರೋದನ್ನ ನೋಡಿದ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಈ ಭಾಗದಲ್ಲಿ ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸುತ್ತಿತ್ತು. ಹೀಗಾಗಿ ಅರಣ್ಯ ಇಲಾಖೆ ಬೋನು ಇಟ್ಟಿತ್ತು. ಎಚ್.ಡಿ.ಕೋಟೆ ಪಟ್ಟಣದ ನಿವಾಸಿ ಹೆತ್ತನಾಯ್ಕರ ಜಮೀನಿನಲ್ಲಿ ಬೋನು ಇಡಲಾಗಿತ್ತು. ಕಳೆದ ರಾತ್ರಿ ಆಹಾರ ಅರಸಿ ಬಂದ ಎರಡು ವರ್ಷದ ಗಂಡು ಚಿರತೆ ಬೋನಿನಲ್ಲಿ ಸಿಕ್ಕಿಬಿದ್ದಿದ್ದು, ಹುಲಿ ಬಂದಿಲ್ಲ.
ಇನ್ನು ಅಚ್ಚರಿ ಎಂದರೆ ಹಸುವಿನ ಕರು ಇನ್ನು ಚಿಕ್ಕದಾಗಿದ್ದರಿಂದಲೋ ಏನು ಚಿರತೆ ಆ ಕರುವಿಗೆ ಏನು ಮಾಡಿಲ್ಲ. ಅಂದರೆ ಚಿರತೆ ಬೇಟೆಯಾಡುವುದಕ್ಕೂ ಇದು ಕರು ಇದನ್ನು ಬೇಟೆಯಾಡುವುದು ಸಲ್ಲ ಎಂದು ಅಂದುಕೊಂಡಿತ್ತೇನೋ? ಇಲ್ಲ ಚಿರತೆಗಳು ಚಿಕ್ಕಚಿಕ್ಕ ಕರುಗಳನ್ನು ಬೇಟೆಯಾಡುವುದಿಲ್ಲವೇನೋ ಗೊತ್ತಿಲ್ಲ. ಆದರೆ ಇದು ಪ್ರಕೃತಿಯ ಮಹಿಮೆ ಹೇಗಿದೆ ಎಂಬುದನ್ನು ಮಾತ್ರ ನಾವು ಇಲ್ಲಿ ಕಾಣುತ್ತಿದ್ದೇವೆ.
Related


You Might Also Like
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...
ಮೈಸೂರು-ಮನಕಲಕುವ ಘಟನೆ: ಆಸ್ಪತ್ರೆ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜತೆ ಭಿಕ್ಷೆ ಬೇಡಿದ ಕುಟುಂಬ
ಮೈಸೂರು: ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆಯ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಹೌದು....
ವರದಕ್ಷಿಣೆ ಕಿರುಕುಳ ಆರೋಪ: ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR ದಾಖಲು
ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಸೊಸೆಯೇ ದೂರು...
ಡಾ.ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರ ಘೊಷಣೆ- ಅಭಿಮಾನಿಗಳಲ್ಲಿ ಹರ್ಷ
ಬೆಂಗಳೂರು: ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಮ್ಮ ದಶಕಗಳ ಬೇಡಿಕೆ ಫಲಿಸಿದೆ ಎಂದು...
ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ....
ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿದ ತಾಯಿ
ಬೆಂಗಳೂರು: ಚಾಲಕ ಬಸ್ಸಿನಲ್ಲಿ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಾಯಿಯೊಬ್ಬಳು ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ...