CrimeNEWSದೇಶ-ವಿದೇಶ

ಪ್ರೇಯಸಿಯ ಕತ್ತು ಹಿಸುಕಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಪ್ರೀತಿಯನ್ನು ನಾವು ಕೊನೆಗೊಳಿಸಿಕೊಳ್ಳೋಣ ಎಂದ ಪ್ರೇಯಸಿಯನ್ನು ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಕತ್ತುಹಿಸುಕಿ ಹತ್ಯೆಮಾಡಿದ ಬಳಿ ತಾನೂ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ನಗರದ ತಲೋಜಾ ಜೈಲು ಆವರಣದಲ್ಲಿ 19 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಇದು ಆ ಪ್ರದೇಶದ ಜನರಲ್ಲಿ ಆ ವೇಳೆ ಆತಂಕ ಉಂಟುಮಾಡಿತ್ತು. ಘಟನೆಯ ಬಗ್ಗೆ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಇತ್ತ ಮುಂಬೈನ ಕಲಾಂಬೋಲಿ ಪ್ರದೇಶದ ನಿವಾಸಿಯಾಗಿದ್ದ 19 ವರ್ಷದ ಯುವತಿ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು ರಾತ್ರಿಯಾದರೂ ಆಕೆ ಮನೆಗೆ ವಾಪಸ್ಸಾಗಿಲ್ಲ ಎಂದು ಯುವತಿಯ ಮನೆಯವರು ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದರು.

ಅಂದೇ ರೈಲ್ವೇ ಪೊಲೀಸರ ಮೂಲಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದರ ಮಾಹಿತಿ ಸಿಕ್ಕಿತ್ತು. ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹದ ಬಳಿ ಫೋನ್‌ನಲ್ಲಿ ಡೆತ್‌ ನೋಟ್ ಪತ್ತೆಯಾಗಿದೆ. ಅದರಲ್ಲಿ ತನ್ನ ಗೆಳತಿಯನ್ನು ಕೊಲೆ ಮಾಡಿರುವುದಾಗಿ ಆತ ಬರೆದುಕೊಂಡಿದ್ದು ಸಿಕ್ಕಿದೆ.

ಇನ್ನು ಪೊಲೀಸರು ಈ ಆತ್ಮಹತ್ಯೆ ಪತ್ರದಲ್ಲಿ ಸಿಕ್ಕ ಸುಳಿವು ಆಧರಿಸಿ ಯುವತಿಯ ಶವಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಆ ವೇಳೆ ಪೊಲೀಸರು ಡ್ರೋನ್ ಸಹಾಯದಿಂದ ಯುವತಿಯ ಶವ ಹುಡುಕುತ್ತಿದ್ದಾಗ ಖಾರ್ಘರ್ ಅರಣ್ಯದಲ್ಲಿ ಯುವತಿ ಮೃತದೇಹ ಪತ್ತೆಯಾಗಿದೆ ಎಂದು ನವಿ ಮುಂಬೈ ಉಪ ಪೊಲೀಸ್‌ ಆಯುಕ್ತ ಅಮಿತ್ ಕಾಳೆ ತಿಳಿಸಿದ್ದಾರೆ.

ಇಬ್ಬರ ನಡುವಿನ ಜಗಳವೇ ಕಾರಣ: ವೈಷ್ಣವಿ ಮನೋಹರ್ ಬಾಬರ್ (19) ಮತ್ತು ವೈಭವ್ ಬುರುಗಲ್ಲೆ (24) ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕೆಲ ದಿನಗಳಿಂದ ವೈಷ್ಣವಿಯು ಪ್ರಿಯಕರನಿಂದ ದೂರವಾಗಲು ಪ್ರಯತ್ನಿಸುವ ಮೂಲಕ ಪ್ರೀತಿ ಕೊನೆಗೊಳಿಸಲು ಬಯಸಿದ್ದಳು. ಈ ಕುರಿತು ಅವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ಪೊಲೀಸರಿಗೆ ಈಗ ಸಿಕ್ಕಿದೆ.

ಅಂತೆಯೇ ಜಗಳ ವಿಕೋಪಕ್ಕೆ ಹೋಗಿದ್ದು, ಪ್ರಿಯಕರನೇ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆ ಬಳಿಕ ಕೋಪದಿಂದ ಆತನೂ ಪತ್ರ ಬರೆದು ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ಅಲ್ಲದೇ ಗೆಳತಿಯ ಕೊಲೆಯಿಂದ ನೋವಾಗಿ ಈ ರೀತಿ ಮಾಡಿಕೊಂಡಿದ್ದೇನೆ ಎಂದು ಯುವಕ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ.

ಕೋಪದಿಂದ ಪ್ರೇಯಸಿಯನ್ನು ಕೊಂದು ಅದರ ನೋವಿನಿಂದ ಆಚೆಬರಲಾಗದೆ ಪ್ರಿಯಕರನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...