CRIMENEWSಮೈಸೂರು

ದೂರು ನೀಡಲು  ಪೊಲೀಸ್‌ಠಾಣೆಗೆ ಹೋಗುತ್ತಿದ್ದ  ಪತ್ನಿಯ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ ಕಿರಾತಕ 

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ನನ್ನ ವಿರುದ್ಧವೇ  ಪೊಲೀಸ್‌ ಠಾಣೆಗೆ ದೂರು ಕೊಡಲು ಹೋಗುತ್ತೀಯ ಎಂದು ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಪತಿಯೇ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಇಂದು ನಡೆದಿದೆ.

ಮಂಗಳವಾರ (ಜೂ.3) ನಗರದ ಸೋಮವಾರಪೇಟೆ ನಿವಾಸಿ ಗಿರೀಶ್ ಎಂಬಾತನೆ ತನ್ನ ಪತ್ನಿ ವಿದ್ಯಾಳನ್ನು ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ ಕೀರಾತಕ.

ಆರು ತಿಂಗಳ ಹಿಂದೆ ಗಂಡ-ಹೆಂಡತಿ ನಡುವೆ ಕಲಹ ಉಂಟಾಗಿತ್ತು. ಆ ವೇಳೆಯೇ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿತ್ತು. ಇನ್ನು ವಿದ್ಯಾಳನ್ನು ಏನಾದರು ಮಾಡಿಬಿಡುತ್ತೇನೆ ಎಂಬ ಭಯದಲ್ಲೇ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು.

ಇನ್ನು ಪತಿ ಸೇರಿದಂತೆ ಆತನ ಕುಟುಂಬದವರ ವಿರುದ್ಧ  ಇಂದು ಠಾಣೆಗೆ ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ನನ್ನ ಕುಟುಂಬವರ ವಿರುದ್ಧವೇ ದೂರು ನೀಡಲು ಹೋಗುತ್ತೀಯ ಎಂದು ಆಕ್ರೋಶಗೊಂಡ ಗಿರೀಶ್‌ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿ, ಬಳಿಕ ಪರಾರಿಯಾಗಿದ್ದಾನೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ   ಸಿಮ್ಸ್ ಆಸ್ಪತ್ರೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು  ಗಿರೀಶ್‌ ಪತ್ತೆಗೆ ಬಲೆ ಬೀಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...