CrimeNEWSನಮ್ಮಜಿಲ್ಲೆ

ಸ್ಕೂಟರ್‌ಗೆ ಗುದ್ದಿದ ಕೋಲೆ ಬಸವ ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಸವಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೋಲೆ ಬಸವನಿಂದ ನಡೆದ ಭಯಾನಕ ಅಪಘಾತದಲ್ಲಿ ಕ್ಯಾಂಟರ್ ಚಾಲಕನ ಸಮಯಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ.

ಈ ಘಟನೆ ನಗರದ ಮಹಾಲಕ್ಷ್ಮಿ ಲೇಔಟ್​ನ ಸ್ವಿಮ್ಮಿಂಗ್ ಪೂಲ್ ಜಂಕ್ಷನ್ ಬಳಿ ನಡೆದಿದೆ. ದಾರಿಯಲ್ಲಿ ಬರುತ್ತಿದ್ದ ಕೋಲೆ ಬಸವ ಶಾಂತವಾಗಿಯೇ ಬಂದು ಒಮ್ಮಿಂದ ಒಮ್ಮೆಲೆ ಎದುರಿಗೆ ಬರುತ್ತಿದ್ದ ಸ್ಕೂಟಿಗೆ ಗುದ್ದಿದೆ. ಪರಿಣಾಮ ಸ್ಕೂಟರ್‌ ಸವಾರ ಲಾರಿಯ ಹಿಂಬದಿ ಚಕ್ರಕ್ಕೆ ಸುಲುಕಬೇಕಿತ್ತು. ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿದಂತಾಗಿದೆ.

ಹೌದು! ಕೋಲೆ ಬಸವ ಈ ರೀತಿ ಒಮ್ಮಿಂದ್‌ ಒಮ್ಮೆಲೇ ವರ್ತಿಸಿದ್ದು ಮಾತ್ರ ಭಯ ಬೀಳಿಸುವಂತಿದೆ. ಸದ್ಯ ಈ ಅಪಘಾತದ ದೃಶ್ಯ ನೋಡಿದರೆ ಒಂದು ಬಾರಿ ಎದೆಯೆಲ್ಲ ನಡುಗಿ ಹೋಗುತ್ತದೆ. ಸ್ಕೂಟರ್‌ ಸವಾರ ತನ್ನ ಪಾಡಿಗೆ ತಾನು ಹೋಗುತ್ತಿದ್ದ. ಇದೇ ವೇಳೆ ಎದುರುಗಡೆಯಿಂದ ಕೋಲೆ ಬಸವನ ಹಿಡಿದುಕೊಂಡು ಮಹಿಳೆಯೊಬ್ಬರು ಬರುತ್ತಿದ್ದರು.

ಅವರ ಪಕ್ಕದಲ್ಲಿ ಕ್ಯಾಂಟರ್ ಲಾರಿ ಕೂಡ ಹೋಗುತ್ತಿತ್ತು. ಆದರೆ, ಕೋಲೆ ಬಸವನಿಗೆ ಅದು ಏನಾಯಿತೋ ಏನು ಗೊತ್ತಿಲ್ಲ. ಮುಂದೆ ಬರುತ್ತಿದ್ದ ಬೈಕ್​ಗೆ ಭಯಾನಕವಾಗಿ ಗುದ್ದಿ ಓಡಿ ಹೋಗಿದೆ. ಈ ವೇಳೆ ಸವಾರ ಕ್ಯಾಂಟರ್​ ಚಕ್ರದಡಿಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಚಾಲಕ ಬ್ರೇಕ್ ಹಾಕಿ ಕ್ಯಾಂಟರ್ ನಿಲ್ಲಿಸಿದ್ದಾನೆ. ಇದರಿಂದ ಬೈಕ್​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ