CrimeNEWSದೇಶ-ವಿದೇಶ

ಪೊಲೀಸರ ಕ್ರೌರ್ಯದಿಂದ ರೈಲಿಗೆ ಸಿಲುಕಿ ಎರಡೂ ಕಾಲುಗಳ ಕಳೆದುಕೊಂಡ ಬೀದಿಬದಿ ವ್ಯಾಪಾರಿ

ವಿಜಯಪಥ ಸಮಗ್ರ ಸುದ್ದಿ

ಕಾನ್ಪುರ: ಪೊಲೀಸರು ಎಸೆದ ತನ್ನ ತಕ್ಕಡಿ ತೆಗೆದುಕೊಳ್ಳಲು ರೈಲ್ವೆ ಹಳಿ ಪ್ರವೇಶಿಸಿದ ಬೀದಿಬದಿ ವ್ಯಾಪಾರಿ ಬಾಲಕ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಜರುಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಾನ್ಪುರದ ಕಲ್ಯಾಣಪುರ್ ಬಳಿಯ ಸಾಹೇಬ್ ನಗರದ ನಿವಾಸಿ 17 ವರ್ಷದ ಅರ್ಸಲಾನ್ ಎರಡೂ ಕಾಲನ್ನು ಕಳೆದುಕೊಂಡ ಬಾಲಕ. ಈ ವೇಳೆ ತೀವ್ರ ಗಾಯೊಂಡಿದ್ದು, ಸದ್ಯಕ್ಕೆ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಎಸ್‌ಡಿಪಿಜಿಐಗೆ ದಾಖಲಿಸಲು ವೈದ್ಯರು ಸೂಚಿಸಿದ್ದಾರೆ.

ಪ್ರತಿದಿನದಂತೆ ಶುಕ್ರವಾರ ಸಂಜೆ ಅರ್ಸಲಾನ್ ಜಿಟಿ ರಸ್ತೆಬದಿಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ. ಆ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ಶದಬ್ ಖಾನ್ ಮತ್ತು ಹೆಡ್ ಕಾನ್ಸ್ಟೇಬಲ್ ರಾಕೇಶ್ ಕುಮಾರ್ ಅರ್ಸಲಾನ್ ಜತೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೆ ಆತನ ಮೇಲೆ ಹಲ್ಲೆ ಮಾಡಿದ್ದಲ್ಲದೆ ತಕ್ಕಡಿಯನ್ನು ರೈಲು ಹಳಿಗಳ ಮೇಲೆ ಎಸೆದಿದ್ದಾರೆ.

ಭಯಭೀತಗೊಂಡ ಅರ್ಸಲಾನ್ ಏನನ್ನು ಯೋಚಿಸಿದೆ ಮರುಕ್ಷಣವೇ ತಕ್ಕಡಿ ಎತ್ತಿಕೊಳ್ಳಲು ರೈಲು ಹಳಿ ತಲುಪಿದಾಗ ವೇಗವಾಗಿ ಬರುತ್ತಿದ್ದ ಮೆಮು ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಆತನ ಎರಡೂ ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತ ಶ್ರಾವವೂ ಆಗಿದೆ.

ಕೂಡಲೇ ಜನರು ಮತ್ತು ಪೊಲೀಸರು ಆ ಬಾಲಕನ್ನು ರೈಲುಹಳಿಯಿಂದ ಎತ್ತಿಕೊಂಡು ಹೋಗುವಾಗ ಎರಡೂ ಕಾಲುಗಳು ಸಂಪೂರ್ಣ ನಜ್ಜುಗುಜ್ಜಾಗಿರುವುದನ್ನು ತೋರಿಸುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಷಯ ತಿಳಿದ ಕಾನ್ಪುರ ಪಶ್ಚಿಮ ಡಿಸಿಪಿ ವಿಜಯ್ ಧುಲ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಬದಿಯ ವ್ಯಾಪಾರಿ ಅರ್ಸಲಾನ್ ಮೇಲೆ ಹಲ್ಲೆ ನಡೆದಿರುವುದು, ಆತನ ತಕ್ಕಡಿಯನ್ನು ರೈಲು ಹಳಿಗಳ ಮೇಲೆ ಎಸೆದಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ಸತ್ಯ ಎಂಬುವುದು ಕಂಡುಬಂದಿದೆ. ಹೀಗಾಗಿ ಆ ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಮತ್ತು ಎಸಿಪಿ ಮಟ್ಟದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತ ಅರ್ಸಲಾನ್‌ನ ಪರಿಸ್ಥಿತಿ ಗಂಭೀರವಾಗಿದ್ದು, ಆತನ ಕಾಲುಗಳು ತುಂಡರಿಸಿದ್ದು, ಹೆಚ್ಚಿನ ರಕ್ತ ಸೋರಿಕೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಒಟ್ಟಾರೆ ಪೊಲೀಸರ ರಕ್ಕಸ ನಡೆಗೆ ಬಡ ಬೀದಿಬದಿ ವ್ಯಾಪಾರಿ ಬಾಲಕನ ಕಾಲು ಶಾಶ್ವತವಾಗಿ ಹೋಗಿದ್ದು, ಆತನ ಪ್ರಾಣದ ಬಗ್ಗೆ ಯಾವುದೇ ಭರವಸೆಯೂ ಇಲ್ಲದಂತಾಗಿದೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ