NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

ಬಸ್‌ ಇಲ್ಲ ಅಂತ KSRTC ಅಧಿಕಾರಿಗಳ ಬೆವರಿಳಿಸಿದ ವಿದ್ಯಾರ್ಥಿನಿ

ಉಚಿತ ಬಸ್‌ ಪ್ರಯಾಣ ಬೇಡ ಸಮಯಕ್ಕೆ ಸರಿಯಾಗಿ ಬಸ್‌ ಓಡಿಸಿ ಅಂತ ಆಗ್ರಹಿಸಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ನಮಗೆ ಉಚಿತ ಅನ್ನೋದೆ ಬೇಡ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸಿ ಸಾಕು ಆಗ ನಾವು ಶಾಲೆ ಕಾಲೇಜುಗಳಿಗೆ ಇನ್‌ಟೈಂಗೆ ಹೋಗಬಹುದು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಎಬಿವಿಪಿ ನೇತೃತ್ವದಲ್ಲಿ ನಿನ್ನೆ ಕುಂದಾಪುರದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ತಮಗಾಗುವ ಬಸ್ ಸಮಸ್ಯೆ ಹೇಳುತ್ತಾ, ಸರ್ಕಾರದ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು. ಉಚಿತ ಬಸ್ಸಿನಿಂದಾಗಿ ವಿದ್ಯಾರ್ಥಿಗಳು ಅಲೆದಾಡುವಂತಾಗಿದೆ. ಬೆಳಗ್ಗೆ, ಸಂಜೆ ಬಸ್ಸಿನಲ್ಲಿ ಸೀಟ್ ಸಿಗುವುದಿಲ್ಲ. ಸರಿಯಾದ ಸಮಯಕ್ಕೆ ಕಾಲೇಜು ಬಳಿಕ ಮನೆ ತಲುಪುವುದು ಕಷ್ಟವಾಗುತ್ತಿದೆ ಎಂದು ಸರ್ಕರ ಮತ್ತು ಸಾರಿಗೆ ಸಂಸ್ಥೆ ವಿರುದ್ಧ ಕಿಡಿಕಾರಿದರು.

ಇನ್ನು ಗ್ರಾಮೀಣ ಭಾಗದಲ್ಲಿ ಹೆಚ್ಚುವರಿ ಬಸ್‌ಗಳನ್ನು ಓಡಿಸಿ ಸಹಾಯ ಮಾಡಿ, ನಮಗೆ ಉಚಿತ ಎಂಬುವುದು ಬೇಡ ನಾವು ಪಾಸ್‌ ತೆಗೆದುಕೊಂಡೆ ಓಡಾಡುತ್ತೇವೆ. ನೀವು ಉಚಿತ ಎಂದೇಳಿ ಬಸ್‌ಗಳನ್ನೇ ಓಡಿಸದಿದ್ದರೆ ನಾವು ಕಾಲೇಜಿಗೆ ತಲುಪುವುದಾದರೂ ಹೇಗೆ ಎಂದು ಪ್ರತಿಭಟನಾ ನಿರತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನೀವು ಸರಿಯಾದ ಸಮಯಕ್ಕೆ ಓಡುವ ಹೆಚ್ಚುವರಿ ಬಸ್‌ಗಳನ್ನು ಕೊಡಿ. ನಾವು ಪಾಸ್ ಮಾಡಿಸುತ್ತೇವೆ. ಹಣಕೊಟ್ಟು ಪ್ರಯಾಣ ಮಾಡುತ್ತೇವೆ ಎಂದು ಪ್ರತಿಭಟನಾ ನಿರತ ಬೈಂದೂರಿನ ವಿದ್ಯಾರ್ಥಿನಿಯೊಬ್ಬರು ಏರು ಧ್ವನಿಯಲ್ಲೇ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಮುಂದೆ ಅಸಮಾಧಾನ ಹೊರಹಾಕಿದರು.

ಇನ್ನು ಈ ಕುರಿತು ವಿದ್ಯಾರ್ಥಿನಿಯೊಬ್ಬಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರ ಕೊಡಿ. ಅವರ ಸಮಸ್ಯೆಯನ್ನು ಕೇಳಿ, ಅದಕ್ಕೆ ಏನು ಪರಿಹಾರ ಕೊಡುತ್ತೀರಿ ಕೊಡಿ. ವಿದ್ಯಾರ್ಥಿಗಳಿಗೆ ಸಮಸ್ಯೆಯಾದರೆ ಅವರೊಂದಿಗೆ ಶಾಸಕನಾಗಿ ನಾನು ಕೂಡ ಪ್ರತಿಭಟನೆಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಎಚ್ಚರಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ