CrimeNEWSದೇಶ-ವಿದೇಶ

ಚಾಲಕನ ನಿಯಂತ್ರ ತಪ್ಪಿ ರಸ್ತೆಗೆ ಬಿದ್ದ ವೋಲ್ವೋ ಬಸ್​: ಓರ್ವ ಮಹಿಳೆ ಸಜೀವ ದಹನ

ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್: ಚಾಲಕನ ನಿಯಂತ್ರ ತಪ್ಪಿ ರಸ್ತೆಗೆ ಬಿದಿದ್ದ ಬಸ್​ ಬೆಂಕಿಯಿಂದ ಧಗಧಗಿಸಿದ ಪರಿಣಾಮ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಸಜೀವವಾಗಿ ದಹನಗೊಂಡಿದ್ದಾರೆ.

ತೆಲಂಗಾಣದ ಗದ್ವಾಲ್​ ಜಿಲ್ಲೆಯ ಜೋಗುಲಾಂಬದ ಬಳಿ ಈ ಘಟನೆ ನಡೆದಿದ್ದು, ಜಗನ್​ ಅಮೆಜಾನ್ ಟ್ರಾವೆಲ್​​ನ ವೋಲ್ವೋ ಬಸ್​ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೈದರಾಬಾದ್​ನಿಂದ ಚಿತ್ತೂರಿಗೆ ತೆರಳುತ್ತಿತ್ತು.

ಈ ವೇಳೆ ಗದ್ವಾಲ್​ನ ಜೋಗುಲಾಂಬದ ರಸ್ತೆ ಬಳಿ ಬರುತ್ತಿದ್ದಂತೆ ರಾತ್ರಿ 3 ಗಂಟೆ ಸುಮಾರಿಗೆ ಚಾಲಕನ ನಿಯಂತ್ರ ತಪ್ಪಿ ಬಸ್​ ಬಿದ್ದು ಹಾಗೇ ಜಾರಿಕೊಂಡು ಹೋಗಿದೆ. ಪರಿಣಾಮ ಬಸ್​ಗೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದೆ.

ಈ ವೇಳೆ ಓರ್ವ ಮಹಿಳೆ ಸಜೀವ ದಹನಗೊಂಡಿದ್ದು, ಒಳಗಿದ್ದ ಎಲ್ಲ ಪ್ರಯಾಣಿಕರು ಇಳಿದು ಜೀವ ಉಳಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಬಸ್​ ಒಳಗಿದ್ದ ಒಬ್ಬ ಮಹಿಳೆಯ ಕೈ ಸಿಕ್ಕಿಕೊಂಡಿದ್ದರಿಂದ ಹೊರಗೆ ಬರಲಾಗಿಲ್ಲ.

ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್​ ಅನ್ನು ವ್ಯಾಪಿಸಿಕೊಂಡಿದ್ದರಿಂದ ಸಿಕ್ಕಿಕೊಂಡಿದ್ದ ಮಹಿಳೆ ಸಜೀವವಾಗಿ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಬಸ್‌ ಇಳಿಯುತ್ತಿದ್ದಾಗ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಒಬ್ಬರ ಪರಿಸ್ಥತಿ ಗಂಭೀರವಾಗಿದೆ ಎನ್ನಲಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ