CrimeNEWSನಮ್ಮಜಿಲ್ಲೆ

ಮಳವಳ್ಳಿ ಬಸ್‌ ನಿಲ್ದಾಣದಲ್ಲಿ 7 ತಿಂಗಳ ಮಗು ಎತ್ತಿಕೊಂಡು ಮಹಿಳೆ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಮಳವಳ್ಳಿ: ಪ್ರಯಾಣಿಕರಿಂದ ತುಂಬಿದ್ದ ಬಸ್​ನಲ್ಲಿ ಸೀಟು ಸಿಗದೆ ಎತ್ತಿಕೊಳ್ಳಲು ನೀಡಿದ್ದ ಮಗುವನ್ನು ಅಪರಿಚಿತೆ ಕದ್ದು ಪರಾರಿಯಾದ ಘಟನೆಯೊಂದು ಮಂಡ್ಯ ಜಿಲ್ಲೆಯ ಮಳವಳ್ಳಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ತಿ. ನರಸೀಪುರ ತಾಲೂಕಿನ ವಡ್ಡರಕೊಪ್ಪಲು ನಿವಾಸಿ ಸವಿತಾ ಮಗು ಕಳೆದುಕೊಂಡ ತಾಯಿ. ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ಸವಿತಾ ಮಗುವಿನ ಸಮೇತ ಬಸ್ ಹತ್ತಿದ್ದಾರೆ.  ಈ ವೇಳೆ ಬಸ್‌ನಲ್ಲಿ ಜನರು ತುಂಬಿದ್ದ ಕಾರಣ ಸೀಟ್‌ನಲ್ಲಿ ಕೂತಿದ್ದ ಅಪರಿಚಿತ ಮಹಿಳೆಯೊಬ್ಬರ ಕೈಗೆ ಸವಿತಾ ಮಗು ನೀಡಿದ್ದಾರೆ.

ಆದರೆ ಮಳವಳ್ಳಿ ಬಸ್ ನಿಲ್ದಾಣದಲ್ಲಿ ತಾನೂ ಇಳಿಯುವುದಾಗಿ ಹೇಳಿ ಕ್ಷಣಾರ್ಧದಲ್ಲಿ ಮಗು ಜೊತೆ  ಪರಾರಿಯಾಗಿದ್ದಾಳೆ.

ಇತ್ತ ಸವಿತಾ ಲಗೇಜ್ ಹಿಡಿದುಕೊಂಡು ಬಸ್‌ನಿಂದ ಇಳಿಯುವಷ್ಟರಲ್ಲಿ ಮಗು ಸಮೇತ ಅಪರಿಚಿತ ಮಹಿಳೆ ಎಸ್ಕೇಪ್ ಆಗಿದ್ದು, ಸದ್ಯ 7 ತಿಂಗಳ ಗಂಡು ಮಗು ಕಳೆದುಕೊಂಡು ತಾಯಿ ಕಂಗಾಲಾಗಿದ್ದಾರೆ.

ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಕಳ್ಳಿಯನ್ನು ಶೋಧದಲ್ಲಿ ಪೊಲೀಸರು ತೊಡಗಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ