CrimeNEWSನಮ್ಮಜಿಲ್ಲೆ

ಮಳವಳ್ಳಿ ಬಸ್‌ ನಿಲ್ದಾಣದಲ್ಲಿ 7 ತಿಂಗಳ ಮಗು ಎತ್ತಿಕೊಂಡು ಮಹಿಳೆ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಮಳವಳ್ಳಿ: ಪ್ರಯಾಣಿಕರಿಂದ ತುಂಬಿದ್ದ ಬಸ್​ನಲ್ಲಿ ಸೀಟು ಸಿಗದೆ ಎತ್ತಿಕೊಳ್ಳಲು ನೀಡಿದ್ದ ಮಗುವನ್ನು ಅಪರಿಚಿತೆ ಕದ್ದು ಪರಾರಿಯಾದ ಘಟನೆಯೊಂದು ಮಂಡ್ಯ ಜಿಲ್ಲೆಯ ಮಳವಳ್ಳಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ತಿ. ನರಸೀಪುರ ತಾಲೂಕಿನ ವಡ್ಡರಕೊಪ್ಪಲು ನಿವಾಸಿ ಸವಿತಾ ಮಗು ಕಳೆದುಕೊಂಡ ತಾಯಿ. ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ಸವಿತಾ ಮಗುವಿನ ಸಮೇತ ಬಸ್ ಹತ್ತಿದ್ದಾರೆ.  ಈ ವೇಳೆ ಬಸ್‌ನಲ್ಲಿ ಜನರು ತುಂಬಿದ್ದ ಕಾರಣ ಸೀಟ್‌ನಲ್ಲಿ ಕೂತಿದ್ದ ಅಪರಿಚಿತ ಮಹಿಳೆಯೊಬ್ಬರ ಕೈಗೆ ಸವಿತಾ ಮಗು ನೀಡಿದ್ದಾರೆ.

ಆದರೆ ಮಳವಳ್ಳಿ ಬಸ್ ನಿಲ್ದಾಣದಲ್ಲಿ ತಾನೂ ಇಳಿಯುವುದಾಗಿ ಹೇಳಿ ಕ್ಷಣಾರ್ಧದಲ್ಲಿ ಮಗು ಜೊತೆ  ಪರಾರಿಯಾಗಿದ್ದಾಳೆ.

ಇತ್ತ ಸವಿತಾ ಲಗೇಜ್ ಹಿಡಿದುಕೊಂಡು ಬಸ್‌ನಿಂದ ಇಳಿಯುವಷ್ಟರಲ್ಲಿ ಮಗು ಸಮೇತ ಅಪರಿಚಿತ ಮಹಿಳೆ ಎಸ್ಕೇಪ್ ಆಗಿದ್ದು, ಸದ್ಯ 7 ತಿಂಗಳ ಗಂಡು ಮಗು ಕಳೆದುಕೊಂಡು ತಾಯಿ ಕಂಗಾಲಾಗಿದ್ದಾರೆ.

ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಕಳ್ಳಿಯನ್ನು ಶೋಧದಲ್ಲಿ ಪೊಲೀಸರು ತೊಡಗಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...